ಕಲಬುರಗಿ: ಕಠಿಣ ಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರತಿಯೊಬ್ಬ ರೋಗಿಯನ್ನು ಪರೀಕ್ಷಿಸಿ, ಸೂಕ್ತ ಚಿಕಿತ್ಸೆ ನೀಡಿ ರೋಗಿಗೆ ಪುನರ್ಜನ್ಮ ನೀಡುವ ವೈದ್ಯರು ದೇವರಿಗೆ ಸಮಾನ ಎಂದು ಉಪನ್ಯಾಸಕ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರು ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಶ್ವನಾಥ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಆಯೋಜಿಸಿದ್ದ ವೈದ್ಯರ ದಿನಾಚಾರಣೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ, ಭಾಗವಹಿಸಿ ಮಾತನಾಡಿದ ಅವರು ವೈದ್ಯಕೀಯ ವೃತ್ತಿ ಎನ್ನುವುದು ಅತ್ಯಂತ ಪವಿತ್ರವಾದದ್ದು. ಕಷ್ಟಕರ ಸನ್ನಿವೇಶದಲ್ಲಿ ಸಮಚಿತ್ತವನ್ನು ಕಾಪಾಡಿಕೊಂಡು ರೋಗಿಗಳ ಜೀವ ಉಳಿಸುವ ಅತ್ಯಂತ ಜವಾಬ್ದಾರಿಯುತ ಕಾರ್ಯವನ್ನು ಸಮಾಜದಲ್ಲಿ ವೈದ್ಯರು ನಿರ್ವಹಿಸುತ್ತಿದ್ದಾರೆ.
ಎಷ್ಟೇ ಒತ್ತಡದಲ್ಲಿ ಕೆಲಸ ಮಾಡಿದರೂ ತಾವು ಚಿಕಿತ್ಸೆ ನೀಡಿದ ರೋಗಿ ಆರೋಗ್ಯಕರವಾಗಿ ಓಡಾಡುವುದನ್ನು ನೋಡಿದರೆ ಸಾಕು ವೈದ್ಯರು ಸಂತೃಪ್ತಿ ಹೊಂದುತ್ತಾರೆ. ಜೀವನದಲ್ಲಿ ಮುಖ್ಯವಾದದ್ದು ಆರೋಗ್ಯವೇ ಹೊರತು, ಹಣವಲ್ಲ. ವೈದ್ಯರಾದವರಿಗೆ ಕರುಣೆ ಮಾತ್ರ ಮುಖ್ಯವಲ್ಲ. ಸಹಾನುಭೂತಿಯೂ ಅಷ್ಟೇ ಮುಖ್ಯ. ರೋಗಿಗಳ ಭಾವನೆಗಳಿಗೆ ಸ್ಪಂದಿಸಿದಾಗ ಮಾತ್ರ ಸಮಾಜದಲ್ಲಿ ವೈದ್ಯರಿಗೆ ಬೆಲೆ ಸಿಗುತ್ತದೆ. ಈ ನಿಟ್ಟಿನಲ್ಲಿ ವೈದ್ಯರು ಮೊದಲು ರೋಗಿಗಳ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಉತ್ತಮ ಚಿಕಿತ್ಸೆ ನೀಡಬೇಕು.
ವೈದ್ಯರು ವಾಣಿಜೋದ್ದೇಶಕ್ಕಾಗಿ ಆರೋಗ್ಯ ಸೇವೆ ನೀಡದೇ ಜನರ ಆರೋಗ್ಯ ದೃಷ್ಟಿಯಿಂದ ಸೇವೆ ನೀಡುವ ಮನೋಭಾವ ಹೊಂದಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿದ್ದು, ಧನುಷ್, ವಿನಾಯಕ, ಬಿಂದುಶ್ರೀ ಸೇರಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…