ಬಿಸಿ ಬಿಸಿ ಸುದ್ದಿ

ಮಾರ್ಕ್ಸ್ ವಾದ ಮಾನವ ಜೀವನ ವಿಧಾನ: ಮಹೇಶ

ವಾಡಿ: ಮಾರ್ಕ್ಸ್ ವಾದ ಕೇವಲ ರಾಜಕೀಯ ಸಿದ್ಧಾಂತವಲ್ಲ. ಅದೊಂದು ಮಾನವ ಜೀವನ ವಿಧಾನವಾಗಿದೆ ಎಂದು ಆಲ್ ಇಂಡಿಯಾ ಕಿಸಾನ್ ಕೇತ್ ಮಜ್ದೂರ್ ಸಮಘಟನೆ (ಎಐಕೆಕೆಎಂಎಸ್) ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ ಹೇಳಿದರು.

ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ) ಕಮ್ಯುನಿಸ್ಟ್ ಪಕ್ಷದ ವತಿಯಿಂದ ರವಿವಾರ ಲಾಡ್ಲಾಪುರ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಮಹಾನ್ ಮಾರ್ಕ್ಸ್ ವಾದಿ ಚಿಂತಕ, ಎಸಿಯುಸಿಐ ಸಂಸ್ಥಾಪಕ ಅಧ್ಯಕ್ಷ ಕಾಮ್ರೇಡ್ ಶಿವದಾಸ್ ಘೋμï ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಬಡತನವಿಲ್ಲದ, ನಿರುದ್ಯೋಗ ಸಮಸ್ಯೆಯಿಲ್ಲದ ಶ್ರೇಷ್ಠ ಸಮಾಜವಾದಿ ವ್ಯವಸ್ಥೆ ನಿರ್ಮಾಣ ಮಾಡುವ ಉದ್ದೇಶವಿರುವ ಇಂಥ  ಮಾರ್ಕ್ಸ್ ವಾದಿ ಚಿಂತನೆಯನ್ನು ದೇಶದ ಜನತೆ ಜೀವನದಲ್ಲಿ ಅಳವಡಿಕೊಳ್ಳುವ ಮೂಲಕ ಕಾರ್ಮಿಕ ವರ್ಗ ಸಂಸ್ಕøತಿ ಬೆಳೆಸಿಕೊಂಡು ಶೋಷಿತರ ವಿಮುಕ್ತಿಗೆ ಬದ್ಧರಾಗಬೇಕು ಎಂದರು.

ಲೆನಿನ್, ಸ್ಟಾಲಿನ್ ಮತ್ತು ಮಾವೋ ಜೆಡಾಂಗ್ ನಂತರ ಅಂತಾರಾಷ್ಟೀಯ ಮಟ್ಟದ ಕಮ್ಯುನಿಸ್ಟ್ ಸಿದ್ಧಾಂತಕ್ಕೆ ಶಿವದಾಸ್ ಘೋμï ನೀಡಿದ ಕೊಡುಗೆ ಅತ್ಯಂತ ದೊಡ್ಡ ಪ್ರಮಾಣದಲ್ಲಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಮ್ಯುನಿಸ್ಟ್ ಚಳವಳಿಗಳು ಶಿವದಾಸ್ ಘೋμïರ ಚಿಂತನೆಗಳಿಲ್ಲದೆ ಇಂದು ತಮ್ಮ ಗುರಿಯನ್ನು ಮುಟ್ಟಲು ಸಾಧ್ಯವಿಲ್ಲ. ಜಗತ್ತಿನಾದ್ಯಂತ ಬಂಡವಾಳಶಾಹಿಗಳ ಕುತಂತ್ರದಿಂದಾಗಿ ಕಮ್ಯುನಿಸ್ಟ್ ಚಿಂತನೆಗೆ ಹಿನ್ನಡೆಯಾದಾಗ ಶಿವದಾಸ್ ಘೋμï ಅವರು ಹೊಸ ಚಿಂತನೆಗಳನ್ನು ತುಂಬಿ ಮಾರ್ಕ್ಸ್ ವಾದ ವನ್ನು ಮತ್ತೆ ಬಲಿಷ್ಟಗೊಳಿಸಿದ್ದಾರೆ ಎಂದರು.

ಮುಖ್ಯ ಅತಿಥಿತಿಯಾಗಿ ಮಾತನಾಡಿದ ಎಸ್‍ಯುಸಿಐ ಪಕ್ಷದ ವಾಡಿ ನಗರ ಸಮಿತಿ ಕಾರ್ಯದರ್ಶಿ ವೀರಭದ್ರಪ್ಪ ಆರ್.ಕೆ, ಪ್ರಸಕ್ತ ಕೇಂದ್ರ ಬಿಜೆಪಿ ಸರ್ಕಾರ ಸೇರಿದಂತೆ ಜಗತ್ತಿನೆಲ್ಲೆಡೆ ಆಳುವ ಸರ್ಕಾರಗಳು ಇಂದು ಜನ ಹೋರಾಟಗಳಿಗೆ ಹೆದರಿದೆ. ಹಾಗಾಗಿ ಹೋರಾಟಗಳನ್ನು ಹತ್ತಿಕ್ಕಲು ಸರ್ಕಾರಗಳು ಫ್ಯಾಸಿವಾದಿ ಕ್ರಮವನ್ನು ಕೈಗೊಳ್ಳುತ್ತಿವೆ. ಆದಾಗ್ಯೂ ಇವರ ದುರಾಡಳಿತದ ವಿರುದ್ಧ ಜನತೆ ನಿರಂತರವಾಗಿ ಬೀದಿಗಿಳಿಯುತ್ತಿದ್ದಾರೆ. ಆದರೆ ಈ ಹೋರಾಟಗಳು ಸಂಘಟಿತವಾಗಿ ನಡೆಯುತ್ತಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.

ಅಖಿಲ ಭಾರತ ಕಿಸಾನ್ ಕೇತ್ ಮಜ್ದೂರ್ ಸಂಘ (ಎಐಕೆಕೆಎಂಎಸ್)ದ ಚಿತ್ತಾಪುರ ತಾಲೂಕು ಉಪಾಧ್ಯಕ್ಷ ಗುಂಡಣ್ಣ ಎಂ.ಕೆ ಅಧ್ಯಕ್ಷತೆ ವಹಿಸಿದ್ದರು.

ರೈತ ಮುಖಂಡರಾದ ಮಲ್ಲಿಕಾರ್ಜುನ ಗಂದಿ, ಶರಣಪ್ಪ ಗಂಜಿ, ಸಾಬಣ್ಣ ಮುಷ್ಟಿಗೇರ, ರಮೇಶ ಪೂಜಾರಿ, ಜಯಶ್ರೀ ಕುಂಬಾರ, ಅನಿಲಗೌಡ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

1 hour ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago