ಬಿಸಿ ಬಿಸಿ ಸುದ್ದಿ

ಸೇವಾ ಮನೋಭಾವನೆ ಬೆಳೆಸಿಕೊಳ್ಳಿ: ಪಾಟೀಲ

ಆಳಂದ:ಸೇವಾದಳದ ಮೂಲಕ ರಾಷ್ಟ್ರೀಯ ಮನೋಭಾವನೆ,ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಿ ಎಂದು ಸೇವಾದಳ ಜಿಲ್ಲಾ ಸಮಿತಿ ಸದಸ್ಯ ಗುರುಶರಣ ಪಾಟೀಲ ಕೊರಳ್ಳಿ ಕರೆ ನೀಡಿದರು.

ಭಾರತ ಸೇವಾದಳ ತಾಲ್ಲೂಕು ಘಟಕ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ತೋಂಟದಾರ್ಯ ಅನುಭವ ಮಂಟಪದಲ್ಲಿ ಮಂಗಳವಾರ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಒಂದು ದಿನದ ಪುನಃಶ್ಚೇತನ ಕಾರ್ಯಾಗಾರ ಉದ್ಘಾಟಿನೆ ಅವರು ಮಾತನಾಡಿದರು.

ಕ್ಷೇತ್ರ ಶೀಕ್ಷಣಾಧಿಕಾರಿ ಸೋಮಶೇಖರ್ ಹಂಚನಾಳ ಮಾತನಾಡಿ,ಶಿಬಿರದಲ್ಲಿ ಶಿಕ್ಷಕರು ತರಬೇತಿ ಪಡೆದುಕೊಂಡು,ಶಾಲೆಯಲ್ಲಿ ಮಕ್ಕಳಿಗೆ ಕಲಿಸಿ ಎಂದು ಸೂಚಿಸಿದರು.

ತೋಂಟದಾರ್ಯ ಅನುಭವ ಮಂಟಪದ ಸಂಚಾಲಕರಾದ ಕೋರಣೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿದ ಅವರು,ಪ್ರಾಮಾಣಿಕ ಸೇವೆ ಇತ್ತಿಚಿಗೆ ಕಡಿಮೆ ಆಗುತ್ತಿದ್ದು,ದೇಶ ಕಟ್ಟುವ ಕೆಲಸ ಶಿಕ್ಷಕರ ಮೇಲಿದೆ,ಶಿಕ್ಷಕರ ಕಾರ್ಯಕ್ಕೆ ಯಾವಾಗಲು ಮಠ ಸಹಕರಿಸುತ್ತದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ನರಸಪ್ಪ ಬಿರಾದಾರ,ಅನುಧಾನಿತ ಶಾಲಾ ಸಹ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಮಲ್ಲಿನಾಥ ಮುನ್ನೋಳಿ, ಸೇವಾದಳ ತಾಲ್ಲೂಕಾಧ್ಯಕ್ಷ ಸೂರ್ಯಕಾಂತ ತಟ್ಟಿ ಮಾತನಾಡಿದರು.

ರಾಷ್ಟ್ರೀಯ ಚಿನ್ಹೆಗಳು, ಸೇವಾದಳದ ಕುರಿತು ರಾಜ್ಯ ಸಂಪನ್ಮೂಲ ಶಿಕ್ಷಕ ಜಯಪ್ರಕಾಶ ಕಟ್ಟಿಮನಿ ಪ್ರ‍ಾತ್ಯಕ್ಷೀಕೆ ನೀಡಿದರು.ಸಮಿತಿಯ ಚಂದ್ರಶೇಖರ್ ಜಮಾದಾರ ಸೇವಾದಳದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಪದವಿ ಕಾಲೇಜಿನ ಪ್ರಾಂಶು ಪಾಲ ಡಾ.ರವೀಂದ್ರ ಕಂಟೇಕೂರ ಉಪನ್ಯಾಸ ನೀಡಿದರು. ದೈಹಿಕ ಶಿಕ್ಷಕರಾದ ದತ್ತಪ್ಪ ಬಡಿಗೇರ ಸೇರಿದಂತೆ ತಾಲ್ಲೂಕಿನ ವಿವಿಧ ಶಾಲೆಯ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು. ಭಾರತ ಸೇವಾದಳದ ಅಧಿನಾಯಕ ಶರಣಬಸಪ್ಪ ವಡಗಾಂವ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

37 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

45 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago