ಬಿಸಿ ಬಿಸಿ ಸುದ್ದಿ

“ರೊಟ್ಟಿ ಸಾಂಬಾರ”ಭಾಗ್ಯ ಜಾರಿಗೊಳಿಸಲು ಮನವಿ

ಕಲಬುರಗಿ: ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ “ಅನ್ನಭಾಗ್ಯ” ಯೋಜನೆ ಪ್ರಕಾರ ಉಚಿತವಾಗಿ 10ಕೆ.ಜಿ ಅಕ್ಕಿ ವಿತರಿಸಲು ಈಗ ಅಕ್ಕಿ ಸಿಗುತ್ತಿಲ್ಲ. ಎಂದರೆ ಬಿಡಿ, ಬರಿ ಅಕ್ಕಿ ತಿಂದರೆ ಹೊಟ್ಟೆ ಉಬ್ಬಿ ಬೊಜ್ಜು ಬೆಳೆಯುತ್ತದೆ. ಅದು ಆರೋಗ್ಯಕ್ಕೆ ಒಳ್ಳೆಯದಲ್ಲ, ಮೇಲಾಗಿ ಸಿಗುತ್ತಿಲ್ಲ. ಹಾಗಾಗಿ ರೊಟ್ಟಿ ಉಂಡರೆ ದೇಹ ಗಟ್ಟಿ ಅಂತಾರೆ ಹಿರಿಯರು. ಆ ಕಾರಣಕ್ಕಾಗಿ “ರೊಟ್ಟಿ ಸಾಂಬಾರ” ಹೊಸ ಯೋಜನೆ ಜಾರಿಗೊಳಿಸಬೇಕೆಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಸದಸ್ಯರಾದ ಶಿವರಾಜ ಅಂಡಗಿ ಅವರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸದರಿ ಮನವಿ ಪತ್ರದಲ್ಲಿ ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲೊಂದಾದ ಕಲಬುರಗಿ ತೊಗರಿ ನಾಡು ಎಂದೇ ಪ್ರಖ್ಯಾತಿ ಪಡೆದ ನಾಡಾಗಿದೆ ಇಲ್ಲಿ ಜೋಳ, ತೊಗರಿ, ಕಡಲೆ, ಸಜ್ಜೆ ಸಮೃದ್ದವಾಗಿ ಬೆಳೆಯುವ ನಾಡಾಗಿದೆ. ಹಾಗಾಗಿ ಸರಕಾರ ಅಕ್ಕಿ ಬದಲಿಗೆ ಪಡಿತರಿಗೆ ಜೋಳ, ತೊಗರಿ ಬೇಳೆ, ಸಜ್ಜೆ, ಕಡಲೆ ಬೇಳೆ, ನೀಡುವ ಮೂಲಕ ಆಯಾ ಭಾಗದ ರೈತರಿಗೆ ಪ್ರೊತ್ಸಾಹಿಸಿದಂತಾಗುತ್ತದೆ.

ಏಕೆಂದರೆ ಜೋಳಕ್ಕೆ ಬೆಲೆ ಇರದೆ ಇರುವ ಕಾರಣಕ್ಕೆ ರೈತರು ತಮ್ಮ ಜೀವನಾವಶಕ್ಕಾಗಿ ಮಾತ್ರ ಜೋಳದ ಬೆಳೆ ಬೆಳೆಯುತ್ತಿದ್ದಾರೆ. ಇದರಿಂದ ಜಾನುವಾರುಗಳಿಗೆ ಮೇವು ಸಿಗದಂತಹ ಪರಿಸ್ಥಿತಿ ಎದುರಾಗಿದೆ ಅದನ್ನು ಸರಿಪಡಿಸಲು ಮಾನ್ಯ ಮುಖ್ಯಮಂತ್ರಿಗಳು ಸದರಿ ಹೊಸ ಯೋಜನೆ ವಿಷಯವನ್ನು ಗಂಬೀರವಾಗಿ ಪರಿಗಣಿಸಿ “ರೊಟ್ಟಿ ಸಾಂಬಾರ” ಭಾಗ್ಯ ಜಾರಿಗೊಳಿಸಿ ಜೋಳ, ತೊಗರಿ, ಕಡಲೆ ಮತ್ತು ಸಜ್ಜ ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

emedialine

Recent Posts

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಝೈನ್ ಗ್ಲೋಬಲ್ (UK) ಲಿಮಿಟೆಡ್ ಜೊತೆಗೆ ಒಪ್ಪಂದ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಝೈನ್ ಗ್ಲೋಬಲ್ UK ಸಂಸ್ಥೆಗಳ ನಡುವೆ ಇಂದು ಸಂಸ್ಥೆಯ ಮುಖ್ಯ ಕಚೇರಿಯಲ್ಲಿ…

17 hours ago

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ 27ರಂದು ರಾಜ್ಯ ಭವನ ಚಲೋ

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ 27ರಂದು ರಾಜ್ಯ ಭವನ ಚಲೋ ಹಮ್ಮಿಕೊಳ್ಳಾಗಿದೆ ಎಂದು ಕರ್ನಾಟಕ ರಾಜ್ಯ ಶೋಷಿತ…

19 hours ago

ಸೇಡಂನಲ್ಲಿ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರ ಉದ್ಘಾಟನೆ

ಸೋಮವಾರದಿಂದ ಹೆಸರು ಖರೀದಿ ಕೇಂದ್ರ ಆರಂಭ: ಡಾ.ಶರಣಪ್ರಕಾಶ ಪಾಟೀಲ ಕಲಬುರಗಿ: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಹೆಸರು ಖರೀದಿಸಲು ಸರ್ಕಾರ…

21 hours ago

ಬುಡಕಟ್ಟು ಜನರು ಮೂಲ ಜಾನಪದ ಕಲಾವಿದರು

ಕಲಬುರಗಿ ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ಕಲಬುರಗಿ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಜಾಫರಬಾದ ವತಿಯಿಂದ “ವಿಶ್ವ…

21 hours ago

ಕಲಬುರಗಿ: ಫರಸಿ ತುಂಬಿದ ಲಾರಿ ಪಲ್ಟಿ: ಹಲವರಿಗೆ ಗಾಯ

ಕಲಬುರಗಿ: 11ಕ್ಕೂ ಹೆಚ್ಚು ಜನ ಕಾರ್ಮಿಕರು ಮತ್ತು ಪರಸಿ ತುಂಬಿದ ಲಾರಿಯೊಂದು ಉರುಳಿಬಿದ್ದು ಹಲವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಂಚೋಳಿ…

22 hours ago

ವಾಡಿ: ಶ್ರಾವಣ ಶನಿವಾರದ ಪ್ರಯುಕ್ತ ಪ್ರಸಾದ ಸಂತರ್ಪಣೆ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ವಿರುವ ಶಕ್ತಿ ಆಂಜನೇಯ ದೇವಸ್ಥಾನ ದಲ್ಲಿ ಮೂರನೇ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ವಡೆ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420