ಕಲಬುರಗಿ: ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಅಸಹಕಾರ ತೋರುತ್ತಿದ್ದು ಮಲತಾಯಿ ಧೋರಣೆ ಖಂಡಿಸಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬುಧವಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಆಹಾರ ಭಂಡಾರದಲ್ಲಿ ಅಕ್ಕಿ ಇದ್ದರೂ ಸಹ ರಾಜ್ಯಕ್ಕೆ ಆಕ್ಕಿ ನೀಡಲು ಕೇಂದ್ರ ಸರಕಾರ ನಿರಾಕರಿಸುತ್ತಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈರಣ್ಣ ಝಳಕಿ, ಅಮರ ಶಿರವಾಳ, ಪರಶುರಾಮ ನಾಟೀಕಾರ, ಶ್ರೀಶೈಲ ಪಾಟೀಲ, ಆರ್ಶದ್ ಖಾನ್ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.