ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕಾಂಗ್ರೆಸ್ ಪಕ್ಷದ ಕೆಲವರು ಬಿಜೆಪಿಯೊಂದಿಗೆ ಕೈಜೋಡಿಸಿದ್ದರು. ಆದರೆ ಪಕ್ಷ ಗೆಲ್ಲಲೇಬೇಕೆಂಬ ನಾನು ಬಯಸಿದ್ದರಿಂದ ನನಗೆ ವಿರೋಧವಿದ್ದ ಎಲ್ಲರಿಗೂ ಈಚೆಗೆ ನಡೆದ ಕರ್ನಾಟಕ ವಿಧಾನಸಭೆಯ ಟಿಕೆಟ್ ನೀಡಿ ಗೆಲ್ಲಿಸಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಬುಧುವಾರ ನಡೆದ ಎಸ್ ಸಿˌ ಎಸ್ಟಿˌ ಓಬಿಸಿ ಮತ್ತು ಅಲ್ಪಸಂಖ್ಯಾತರ ವಿಭಾಗದ “ನಾಯಕತ್ವ ಬೆಳವಣಿಗೆ ಮಿಷನ್” ಕುರಿತು ಪಕ್ಷದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.