ದಿವ್ಯಾಂಗರ ಕ್ರೀಡೆಗೆ ಉತ್ತೇಜನ: ಬಸವರಾಜ ಹೆಳವರ ಹರ್ಷ

0
41

ಕಲಬುರಗಿ: ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಸೌಕರ್ಯ ಮತ್ತು ನುರಿತ ತರಬೇತುದಾರರಿಂದ ಹೆಚ್ಚಿನ ತರಬೇತಿ ನೀಡಲು ಈ ಸಲದ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು ವರ್ಷ ತಂದಿದೆ ಎಂದು ವಿಶೇಷಚೇತನ ಸಹಾಯವಾಣಿ ಪ್ರತಿಷ್ಠಾನದ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಪ್ಯಾರಾಲಂಪಿಕ್ ವಿಜೇತರಿಗೆ ಗ್ರುಪ್ ಎ ಹುದ್ದೆ ಮತ್ತು ಏಷಿಯನ್ ಹಾಗೂ ಕಾಮನ್‌ವೆಲ್ತ್ ಕ್ರೀಡಾ ವಿಜೇತರಿಗೆ ಗ್ರುಪ್ ಬಿ ಹುದ್ದೆಗಳಿಗೆ ನೇಮಕ ಮಾಡಲು ಕೂಡ ಕ್ರಮಕೈಗೊಳ್ಳಲಾಗುತ್ತಿದೆ.ಸರ್ಕಾರ ಈ ಸಲದ ಬಜೆಟ್‌ನಲ್ಲಿ ವಿಶೇಷ ಅನುದಾನ ನೀಡುವ ಮೂಲಕ ದಿವ್ಯಾಂಗರ ಕ್ರಿಡೇಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯಕ ಯೋಜನೆಗಳನ್ನು ಜಾರಿಗೆ ತಂದಿದ್ದು ಹರ್ಷದಾಯಕವಾಗಿದೆ ಎಂದಿದ್ದಾರೆ.

Contact Your\'s Advertisement; 9902492681

ರಾಜ್ಯದ ಎಲ್ಲಾ ವಿಶೇಷಚೇತನ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಲು ಸರ್ಕಾರದಿಂದ ನೇರವು ನೀಡಬೇಕು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here