ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದ ಕಾರ್ಯಾಚರಣೆ ಕುರಿತು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಮಾನ ನಿಲ್ದಾಣದ ನಿರ್ದೇಶಕರಾದ ಡಾ. ಮಹೇಶ್ ಅವರಿಂದ ಮಾಹಿತಿ ಪಡೆದುಕೊಂಡರು.
ಆ ಸಂದರ್ಭದಲ್ಲಿ ಕೆಲ ಸಮಸ್ಯೆಗಳನ್ನು ನಿರ್ದೇಶಕರು ಸಚಿವರ ಗಮನಕ್ಕೆ ತಂದು, ಮುಖ್ಯವಾಗಿ ವಿಮಾನ ಸೇವೆಗಳ ಸಂಖ್ಯೆಯಲ್ಲಿ ಕಡಿತವಾಗಿದ್ದು, ಇದನ್ನು ಹೆಚ್ಚಿಸುವಂತೆ ಮನವಿ ಮಾಡಿದರು. ಈ ಕುರಿತು ಕೇಂದ್ರ ವಿಮಾನಯಾನ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಸಚಿವರು ತಿಳಿಸಿದರು.
ಕಲಬುರಗಿ ವಿಮಾನ ನಿಲ್ದಾಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತದೆ. ನಿಲ್ದಾಣದ ಕಸ ವಿಲೇವಾರಿ ಸಮಸ್ಯೆ ಉಂಟಾಗುತ್ತಿದ್ದು, ಇದರಿಂದ ನಿಲ್ದಾಣದ ಕಾರ್ಯ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ನಿರ್ದೇಶಕರು ಸಚಿವರ ಗಮನಕ್ಕೆ ತಂದಾಗ ಕೂಡಲೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಬಹುಮುಖ್ಯ ಸಂಪರ್ಕ ಕೊಂಡಿಯಾಗಿರುವ ನಮ್ಮ ಕಲಬುರ್ಗಿ ವಿಮಾನ ನಿಲ್ದಾಣದ ಉಪಯುಕ್ತ ಬಳಕೆ ಹೆಚ್ಚಿಸಲು ಹಾಗೂ ಮತ್ತಷ್ಟು ಜನಸ್ನೇಹಿ ಹಾಗೂ ಜನಪಯೋಗಿಯಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮತ್ತು ಜಿಲ್ಲಾಡಳಿತದ ವತಿಯಿಂದ ಆಗಬೇಕಾದ ಎಲ್ಲಾ ಕೆಲಸಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಚಿವರು ಭರವಸೆ ನೀಡಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…