ತಾವು ಸಂಚರಿಸುವಾಗ ಸಾರ್ವಜನಿಕರ ವಾಹನ ತಡೆ ಬೇಡ: ಪೊಲೀಸರಿಗೆ ಸಚಿವರ ಸೂಚನೆ

0
55

ಕಲಬುರಗಿ: ತಾವು ಸಂಚರಿಸುವಾಗ ಸಾರ್ವಜನಿಕರ ವಾಹನ‌ ಸಂಚಾರಕ್ಕೆ ತಡೆ ಮಾಡಬೇಡಿ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಶರಣಪ್ರಕಾಶ ಪಾಟೀಲ ಪೊಲೀಸರಿಗೆ ಸೂಚಿಸಿದರು.

ಕಲಬುರಗಿಯಲ್ಲಿ ಇಂದು ಪೊಲೀಸ್ ಕಮೀಷನರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತಂತೆ ಮಾಹಿತಿ ಪಡೆದುಕೊಂಡು ಮಾತನಾಡುತ್ತಿದ್ದ ಸಚಿವರು, ತಮ್ಮ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

Contact Your\'s Advertisement; 9902492681

ಸಚಿವರ ಅಥವಾ ಯಾವುದೇ ಜನಪ್ರತಿನಿಧಿಗಳ ಓಡಾಟ ಸಾರ್ವಜನಿಕರ ಓಡಾಟಕ್ಕೆ ಅನಗತ್ಯ ವಿಳಂಬ ಉಂಟು ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಜೀರೋ ಟ್ರಾಫಿಕ್/ತಡೆ ಮಾಡದಂತೆ ಅಧಿಕಾರಿಗಳಿಗೆ ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here