ಮುಸ್ಲಿಂ ಸಮುದಾಯದಕ್ಕೂ 2ಬಿ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಮನವಿ

0
59

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ 14ನೇ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರವಗ೯ 1 ಹಾಗೂ ಪ್ರವಗ೯ 2ಎ ನಲ್ಲಿ ಬರುವ ಸಮುದಾಯಗಳಿಗೆ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದ್ದಾರೆ ಅದೇ ರೀತಿ ಮುಸ್ಲಿಂ ಸಮುದಾಯದಕ್ಕೂ 2 ಬಿ ಸಿವಿಲ್ ಕಾಮಗಾರಿಗಳಿಗೆ ಮೀಸಲಾತಿ ಮಾಡಬೇಕೆಂದು ಕಾಂಗ್ರೆಸ್ ಅಲ್ಪಸಂಖ್ಯಾತ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಅಜೀಮ್ ಜಮಾದರ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಸುಮಾರು 82 ಪ್ರತಿಶತ ಮುಸ್ಲಿಂಮರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಅದಕ್ಕಾಗಿ ಅಲ್ಪಸಂಖ್ಯಾತ ರಿಗಾಗಿ ಮೀಸಲಾತಿಯನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿ ಅಲ್ಪಸಂಖ್ಯಾತರಿಗೂ ಸೌಲಭ್ಯಗಳನ್ನು ಸಿಗುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here