ಕಲಬುರಗಿ: ಅವಶ್ಯಕತೆಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿದರೆಜೀವನಕಷ್ಟಸಾಧ್ಯಎಂದುಉಪನ್ಯಾಸಕ, ಚಿಂತಕದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.ಅವರುಜೇವರ್ಗಿ ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿಶ್ವಜನಸಂಖ್ಯಾ ದಿನಾಚಾರಣೆಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಯಾವುದೇತಾಯಿಗೆ ಮಕ್ಕಳನ್ನು ಪಡೆಯುವುದು ಸಂತೋಷದ ವಿಚಾರ.ಆದರೆ, ಆ ವಿಚಾರದಲ್ಲಿಜಾಗೃತಿ ವಹಿಸಿ ಆರತಿಗೊಬ್ಬ ಮಗಳು, ಕೀರ್ತಿಗೊಬ್ಬ ಮಗನನ್ನು ಪಡೆದರೆ ಸಾಕು ಎನ್ನುವದೃಷ್ಟಕೋನಇರಬೇಕು.ಜನಸಂಖ್ಯೆಯು ಹೆಚ್ಚಳ ಆಗುವುದರಿಂದ ಮತ್ತುಕಡಿಮೆಯಾಗುವುದರಿಂದ ಆಗುವ ಸಂಗತಿಗಳ ಬಗ್ಗೆ ವಿದ್ಯಾರ್ಥಿದೆಸೆಯಿಂದಲೇ ತಿಳಿದುಕೊಂಡು ಅದರ ಬಗ್ಗೆ ಕಾಳಜಿ ವಹಿಸಿ, ಜಾಗೃತಿಯನ್ನುಂಟು ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ.
ಜನಸಂಖ್ಯಾ ಸ್ಫೋಟದಿಂದಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿದ್ದು, ಅದರ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕಾಗಿದೆ.ವಿಶ್ವದಜನಸಂಖ್ಯೆಯಲ್ಲಿ ಭಾರತ ನಂ.1 ದೇಶವಾಗಿ ಹೊರಹೊಮ್ಮಿದ್ದು, ಇಲ್ಲಿ ಪ್ರತಿಗಂಟೆಗೆ 3,321 ಜನನ ಸಂಖ್ಯೆಇದೆ.ಈ ರೀತಿಯ ವೇಗದಜನಸಂಖ್ಯೆ ಬೆಳವಣಿಗೆದೇಶದ ಪ್ರಗತಿಗೆ ಪೂರಕವಲ್ಲ. ಕರ್ನಾಟಕದಲ್ಲೂಜನಸಂಖ್ಯೆ 7 ಕೋಟಿ ಸನಿಹದಲ್ಲಿದೆ.ಈ ರೀತಿಯ ವೇಗದಜನಸಂಖ್ಯೆ ಬೆಳವಣಿಗೆ ದೇಶದ ಪ್ರಗತಿಗೆ ಪೂರಕವಲ್ಲ.
ಆರೋಗ್ಯವಂತಕುಟುಂಬ ಹೊಂದಲು ಸಾಧ್ಯ ಆಗುವುದಿಲ್ಲ. ನಿರುದ್ಯೋಗ, ಆಹಾರ, ವಸತಿ, ಆರೋಗ್ಯ ಸಮಸ್ಯೆಗಳು ಹೆಚ್ಚುತ್ತವೆ. ಆದ್ದರಿಂದಜನಸಂಖ್ಯೆಗೆಕಡಿವಾಣ ಹಾಕಲೇಬೇಕಿದೆ.ರೂಢಿ, ಸಂಪ್ರದಾಯ, ಮೂಢನಂಬಿಕೆಇತರೆಆಚರಣೆಹಂಗನ್ನುತೊರೆದು, ವೈಜ್ಞಾನಿಕದೃಷಿಕೋನ ಬೆಳೆಸಿಕೊಳ್ಳಬೇಕು. ಎಲ್ಲಾಆರೋಗ್ಯ ಕೇಂದ್ರಗಳಲ್ಲಿ ಕುಟುಂಬ ಕಲ್ಯಾಣ ವಿಧಾನಗಳು ಲಭ್ಯವಿದೆ.ನೂತನ ವಿಧಾನಗಳನ್ನು ಅನುಸರಿಸುವ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಬಹುದುಎಂದುಉಪನ್ಯಾಸಕ, ಚಿಂತಕದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.ಈ ಸಂದರ್ಭಗಳಲ್ಲಿ ಪ್ರಶಿಕ್ಷಣಾರ್ಥಿಗಳಾದ ಶಿವಲೀಲಾ, ರಾಜೇಶ್ವರಿ, ಸಂಗೀತಕಲಾವಿದೆ ಸಾವಿತ್ರಿ, ಮಹಾದೇವಿ, ಪ್ರೀಯಾಂಕ, ಶಾಹಿಸ್ತಾಬಾನು, ಸಿದ್ದೇಶ್ವರ ಮುಂತಾದವರು ಹಾಜರಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…