ಶ್ರೀನಿವಾಸ ಸರಡಗಿ ಶಕ್ತಿ ಪೀಠದ ಪೂಜ್ಯರಿಗೆ ಸುವರ್ಣ ಕಿರೀಟ ದಾರಣೆ 23 ರಂದು

0
79

ಕಲಬುರಗಿ: ತಾಲೂಕಿನ ಶ್ರೀನಿವಾಸ್ ಸರಡಗಿ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಶ್ರಾವಣ ಮಾಸದ ನಿಮಿತ್ತ ಆ.೨೩ ರಂದು ಶಕ್ತಿ ಪೀಠದ ಪಿಠಾಧಿಪತಿಗಳಾದ ಪೂಜ್ಯ ಡಾ. ಅಪ್ಪಾರಾವ ದೇವಿ ಮುತ್ಯಾ ಮಹಾರಾಜರಿಗೆ ಸುವರ್ಣ ಕಿರೀಟ ಧಾರಣೆ ಹಾಗೂ ಗುರುವಂದನ ಕಾರ್ಯಕ್ರಮ ಜರುಗುವುದು.

ಬೆಳಿಗ್ಗೆ 8 ಗಂಟೆಗೆ ದೇವಿಗೆ ಮಹಾ ಅಭಿಷೇಕ, ಮಹಾಲಂಕಾರ ಮಹಾ ನೈವೇದ್ಯ, ಕುಂಕುಮ ಅರ್ಚನೆ ಹಾಗೂ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಪೂಜ್ಯರ ನೇತ್ರತ್ವದಲ್ಲಿ ಜರಗಲಿದ್ದು, ನಂತರ ಪ್ರಸಾದ ವ್ಯವಸ್ಥೆ ಇರುತ್ತದೆ. ದಯವಿಟ್ಟು ಎಲ್ಲಾ ಭಕ್ತಾದಿಗಳು ಕಾರ್ಯಕ್ರಮದಲ್ಲಿಭಾಗವಹಿಸಿ ದೇವಿಯ ದರ್ಶನ ಪಡೆದು ಪುನಿತರಾಗಬೇಕು ಎಂದು ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ ಪಾಟೀಲ್ ಬೆನೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here