ಬಿಸಿ ಬಿಸಿ ಸುದ್ದಿ

ಜುಲೈ 15ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ ೧೫ ರಂದು ಬೆಳಿಗ್ಗೆ ೧೦.೩೦ ಗಂಟೆಯಿAದ ಮಧ್ಯಾಹ್ನ ೨ ಗಂಟೆಯವರೆಗೆ ಕಲಬುರಗಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಲೀಡ್ ಅಸೋಸಿಯೇಟ್ಸ್ ಪ್ರೆöÊ.ಲಿ. ದಲ್ಲಿ ಟೆಕ್ನಿಶಿಯನ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ ೧೮ ರಿಂದ ೨೮ ವರ್ಷದೊಳಗಿರಬೇಕು. ಚಾನಲ್ಸ್ಪ್ಲೇ (ಏರ್‌ಟೆಲ್) ಬಿಜನೆಸ್ ಡೆವಲಪ್‌ವೇಂಟ್ ಆಫೀಸರ್ ಹುದ್ದೆಗೆ ಪಿ.ಯು.ಸಿ, ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ ೧೮ ರಿಂದ ೩೦ ವರ್ಷದೊಳಗಿರಬೇಕು.

ಬೆಂಗಳೂರಿನ ರವಿ ಗ್ರಾಫಿಕ್ಸ್ದಲ್ಲಿ ಮಷಿನ್ ಆಪರೇಟರ್ ಹುದ್ದೆಗೆ ಐ.ಟಿ.ಐ, ಡಿಪ್ಲೋಮಾ /ಬಿ.ಇ. ಮೆಕ್ಯಾನಿಕ್ ಪಾಸಾಗಿರಬೇಕು. ಫಿಡರ್ ಮ್ಯಾನ್ ಹುದ್ದೆಗೆ ಐ.ಟಿ.ಐ. ಪಾಸಾಗಿರಬೇಕು.. ಗ್ರಾಫಿಕ್ಸ್ ಡಿಸೈನರ್ ಹುದ್ದೆಗೆ ಬಿ.ಇ., ಬಿ.ಟೇಕ್ ಮೆಕ್ಯಾನಿಕ್ ಪಾಸಾಗಿರಬೇಕು. ಅಕೌಂಟ್ಸ್ ಆಫೀಸರ್ ಅಡ್ಮಿನ್ ಹುದ್ದೆಗೆ ಬಿ.ಕಾಮ್, ಬಿ.ಸಿ.ಎ. ಪಾಸಾಗಿರಬೇಕು. ವಯೋಮಿತಿ ೧೮ ರಿಂದ ೩೦ ವರ್ಷದೊಳಗಿರಬೇಕು.

ಮುತ್ತೂಟ್ ಫೈನಾನ್ಸ್ದಲ್ಲಿ ಟ್ರೆöÊನಿ, ರಿಲೇಶನ್‌ಶಿಪ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ಫ್ಲಿಪ್‌ಕಾರ್ಟ್ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು.

ಕ್ಯಾಡ್‌ಮ್ಯಾಕ್ಸ್ ಸಲ್ಯೂಷನ್‌ದಲ್ಲಿ ಟೆಕ್ನಿಷಿಯನ್, ಡಿಜೈನ್ ಇಂಜಿನಿಯರ್ ಹುದ್ದೆಗೆ ಐ.ಟಿ.ಐ., ಡಿಪ್ಲೋಮಾ /ಬಿ.ಇ. ಪಾಸಾಗಿರಬೇಕು. ವಯೋಮಿತಿ ೧೮ ರಿಂದ ೩೦ ವರ್ಷದೊಳಗಿರಬೇಕು.

ಮ್ಯಾನ್‌ಪವರ್ ಗ್ರೂಪ್ ಸರ್ವಿಸ್ ಇಂಡಿಯಾ ಪ್ರೆöÊ.ಲಿ.ದಲ್ಲಿ ಟೆಕ್ನಿಷಿಯನ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ ೧೮ ರಿಂದ ೨೮ ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ದೋಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-274846ಮೊಬೈಲ್ ಸಂಖ್ಯೆ 9620095270 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

21 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago