ಬಿಸಿ ಬಿಸಿ ಸುದ್ದಿ

ಕಾದು ನೋಡುವ ತಂತ್ರ ಅನುಸರಿಸಲು ಕಾರಂಜಾ ಸಂತ್ರಸ್ತರಿಗೆ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಸಲಹೆ

ಬೀದರ: ಕಾರಂಜಾ ನೀರಾವರಿ ಯೋಜನೆಗೆ ತಮ್ಮ ತಾಯಿ ಸಮಾನ ಭೂಮಿ ನೀಡಿ,ಮನೆ ಮಠ ಕಳೆದುಕೊಂಡ ರೈತ ಸಂತ್ರಸ್ತರು ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮಾತನ್ನಾಡಿದ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿಯವರು ರೈತ ಸಂತ್ರಸ್ತರು ದುಡುಕಿ ತಕ್ಷಣ ಯಾವುದೇ ರೀತಿಯ ಉಗ್ರ ಹೋರಾಟಗಳು ಹಮ್ಮಿಕೊಳ್ಳದೆ ಸಧ್ಯ ಕಾದು ನೋಡುವ ತಂತ್ರ ಅನುಸರಿಸಲು ಕಾರಂಜಾ ಸಂತ್ರಸ್ತರಿಗೆ ಸಲಹೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಹಿರಿಯ ಹೋರಾಟಗಾರರಾದ ಲಕ್ಷ್ಮಣ ದಸ್ತಿಯವರು ಶುಕ್ರವಾರ ಕಾರಂಜಾ ಸಂತ್ರಸ್ತರ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೈತ ಸಂತ್ರಸ್ತರು ತಮ್ಮ ನ್ಯಾಯಯುತವಾದ ಬೇಡಿಕೆಗೆ ಆಗ್ರಹಿಸಿ ಉಗ್ರ ಹೋರಾಟಗಳು ಹಮ್ಮಿಕೊಳ್ಳುವ ಬಗ್ಗೆ ವಿಸ್ತೃತವಾಗಿ ತಮ್ಮ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದರು.ಬಹುತೇಕ ಸಂತ್ರಸ್ತರ ಗ್ರಾಮಗಳ ಮುಖಂಡರು ಮಾತನ್ನಾಡಿ ನೂತನ ಸರ್ಕಾರ ರಚನೆಯಾದ ನಂತರ ಬೀದರ ಜಿಲ್ಲೆಗೆ ಎರಡು ಸಚಿವ ಸ್ಥಾನಗಳು ಸಿಕ್ಕಮೇಲೆ ನಮಗೆ ಬಹಳ ಖುಷಿಯಾಗಿತ್ತು ಅದರಂತೆ ನೂತನ ಸಚಿವರಾದ ಈಶ್ವರ ಖಂಡ್ರೆ ಮತ್ತು ರಹೀಂ ಖಾನ್ ರವರು ಸಚಿವರಾದ ತಕ್ಷಣ ಬೀದರ ಜಿಲ್ಲೆಯ ಮೊದಲನೇ ಭೇಟಿ ಮಾಡಿದ ಸಂದರ್ಭದಲ್ಲಿ ನಮ್ಮ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ಮಾಡಿ ನಮ್ಮ ಬೇಡಿಕೆಗೆ ಸ್ಪಂದಿಸಿದರು.

ಈ ಆಗು ಹೋಗುಗಳು ನೋಡಿ ಈಗ ನಮ್ಮ ಬೇಡಿಕೆ ಈಡೇರುವವದೆಂಬ ಬಲವಾದ ನಿರೀಕ್ಷೆ ಇಟ್ಟುಕೊಂಡಿದ್ದೇವು ಆದರೆ ಪ್ರಸ್ತುತ ರಾಜ್ಯದ ಬಜಟ್ ನಲ್ಲಿ ನಮ್ಮ ಬೇಡಿಕೆ ಬಗ್ಗೆ ಮತ್ತು ಬೀದರ ಜಿಲ್ಲೆಯ ರಚನಾತ್ಮಕ ಪ್ರಗತಿಯ ಬಗ್ಗೆ ಯಾವ ಅಂಶಗಳು ಕಂಡುಬರದೆ ಇರುವುದು ನಮಗೆ ನೋವು ತಂದಿದೆ.ಇಂತಹ ಸ್ಥಿತಿಯಲ್ಲಿ ನಾವು ಇದೆ ಮಾದರಿಯ ಹೋರಾಟ ಮುಂದುವರಿಸದೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಉಗ್ರ ಹೋರಾಟ ಹಮ್ಮಿಕೊಳ್ಳುವ ಬಗ್ಗೆ ಬಹಳಷ್ಟು ಮುಖಂಡರು ಹೇಳಿದರೆ ,ಕೆಲವು ಮುಖಂಡರು ಜಿಲ್ಲೆಯಿಂದ ಪ್ರಭಾವಿ ಸಚಿವರು ಸರ್ಕಾರದಲ್ಲಿ ಇರುವುದರಿಂದ ತಮ್ಮ ಬೇಡಿಕೆಗೆ ಬರುವ ದಿನಗಳಲ್ಲಿ ಸ್ಪಂದನೆ ಸಿಗುವ ಬಗ್ಗೆ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದರು.

ಕಾರಂಜಾ ಮುಳುಗಡೆ ಸಂತ್ರಸ್ತರ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ ಹುಚಕನಳ್ಳಿ ಮಾತನ್ನಾಡಿ ಕಲ್ಯಾಣ ಕರ್ನಾಟಕದ ಹಿರಿಯ ಹೋರಾಟಗಾರರಾದ ಲಕ್ಷ್ಮಣ ದಸ್ತಿಯವರ ಮಾರ್ಗ ದರ್ಶನದಂತೆ ಮುಂದಿನ ರೂಪುರೇಷೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಂತ್ರಸ್ತರಲ್ಲಿ ಮನವರಿಕೆ ಮಾಡಿದರು. ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿಯವರು ರೈತ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿ ಒಂದು ವರ್ಷಕ್ಕೂ ಮೇಲ್ಪಟ್ಟ ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಇದೆ, ಗಾಂಧಿ ಅಂಬೇಡ್ಕರ್ ಮಾರ್ಗದ ಈ ಹೋರಾಟಕ್ಕೆ ಗಂಭೀರವಾಗಿ ಪರಿಗಣಿಸುವದು ಸರ್ಕಾರದ ಬದ್ಧತೆಯಾಗಿದೆ.

ನೂತನ ಸರ್ಕಾರ ಕಾರಂಜಾ ಸಂತ್ರಸ್ತರ ಬೇಡಿಕೆಯ ಬಗ್ಗೆ ಯಾವ ನಿರ್ಣಯ ತೆಗೆದುಕೊಳ್ಳುತದೆ ಎಂಬುವುದರ ಬಗ್ಗೆ ಕಾದು ನೋಡವದು ಅವಶ್ಯವಾಗಿದೆ ಎಂದ ಅವರು ಕಾಂಗ್ರೆಸ್ ಪಕ್ಷ ಸೇರಿದಂತೆ ಬಿಜೆಪಿ ಪಕ್ಷ ಕಳೆದ ಚುನಾವಣೆ ಸಂದರ್ಭದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸುವ ಬಗ್ಗೆ ಅಧಿಕೃತ ತಮ್ಮ ಪ್ರಣಾಳಿಕೆಯಲ್ಲಿ ಘೋಷಣಿ ಮಾಡಿರುವುದರಿಂದ ಈ ಬಗ್ಗೆ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಿ ಬದ್ದತೆ ಪ್ರದರ್ಶನ ಮಾಡಬೇಕೆಂದು ಸರ್ಕಾರಕ್ಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಬೀದರ ಜಿಲ್ಲೆಯ ಜನಪ್ರತಿನಿಧಿಗಳಿಗೆ ಆಗ್ರಹಿಸಿದರು.

ಮುಖಂಡರಾದ ರಾಜಕುಮಾರ ಕೊಸಮ್, ನಾಗಶೆಟ್ಟಿ ಹಚ್ಚಿ, ರಾಜಕುಮಾರ ರಂಜೋಳ, ಭೀಮರೆಡ್ಡಿ ಜೌರಾದ ಎಸ್,ಮಾದಪ್ಪ ಸಂಗೋಳಗಿ, ಬಸವರಾಜ ಹಿಂದೆ, ಮಹೇಶ್ ಕಮಲಾಪುರ,ಗಂಗಾರೆಡ್ಡಿ ಔರಾದ ಎಸ್, ಕಲ್ಯಾಣರಾವ ಚನ್ನಶೆಟ್ಟಿ ಸಂತ್ರಸ್ತರರನ್ನು ಉದ್ದೇಶಿಸಿ ಮಾತನಾಡಿ ದಸ್ತಿಯವರೊಂದಿಗೆ ತಮ್ಮವಿಚಾರಗಳು ಹಂಚಿಕೊಂಡರು.ಈ ಸಂದರ್ಭದಲ್ಲಿ ಅಯಾ ಗ್ರಾಮದ ಸಂತ್ರಸ್ತರ ಪ್ರಮುಖರನೇಕರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

31 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

33 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

36 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago