ಬಿಸಿ ಬಿಸಿ ಸುದ್ದಿ

ಆರ್ಥಿಕ ಸ್ಥಿತಿಗಿಂತ, ಆರೋಗ್ಯವಂತ ಸ್ಥಿತಿ ಶ್ರೇಷ್ಠ

ಕಲಬುರಗಿ: ಆರ್ಥಿಕ ಸ್ಥಿತಿ ಎಷ್ಟು ಚೆನ್ನಾಗಿದ್ದರೂ ಕೂಡ ಜೀವನದ ನಿಜವಾದ ಸಂತೋಷ ಅನುಭವಿಸಲು ಉತ್ತಮವಾದ ಆರೋಗ್ಯ ಬಹು ಮುಖ್ಯ ಎಂದು ಹಿರಿಯ ವೈದ್ಯರಾದ ಡಾ. ಎಸ್ ಎಸ್ ಗುಬ್ಬಿ ಹೇಳಿದರು.

ತಾಲೂಕಿನ ಉಪಳಾಂವ ಗ್ರಾಮದ ಶ್ರೀ ರಾಮ ಕನ್ನಡ ಶಾಲಾ ಆವರಣದಲ್ಲಿ ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘ ಹಾಗೂ ಶೈನ್ ಹೆಲ್ತ್ ಕೇರ್ ಸೆಂಟರ್ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ದಣಿವರಿಯದ ನಾಯಕ, ನ್ಯಾಯವಾದಿ ಹಣಮಂತರಾಯ ಅಟ್ಟೂರ ಅವರ ಹುಟ್ಟುಹಬ್ಬ ಹಾಗೂ 26 ವರ್ಷದ ಸಮಾಜ ಸೇವೆಯ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಗ್ರಾಮೀಣ ಭಾಗದ ಜನರು ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಮುನ್ನೆಚ್ಚರಿಕೆವಹಿಸಿ ಕೊಂಡು ಜೀವನ ಸಾಗಿಸಬೇಕು.ದಣಿವರಿಯದ ನಾಯಕ ಅಟ್ಟೂರ ಅವರ ಸಮಾಜ ಸೇವೆಯನ್ನು ಗುರುತಿಸಿ ಇಂತಹ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂಘದ ಕಾರ್ಯ ಶ್ಲಾಘನೀಯ. ಇಂತಹ ಸಮಾರಂಭಗಳು ಸಮಾಜ ಸೇವೆ ಮಾಡಲು ಇಮ್ಮಡಿಗೊಳಿಸುತ್ತವೆ ಎಂದು ಮಾರ್ಮಿಕವಾಗಿ ನುಡಿದರು.

ಜೀವನ ಜ್ಯೋತಿ ಆಸ್ಪತ್ರೆಯ ನಿರ್ದೇಶಕರಾದ ಡಾ. ಅಮರನಾಥ ಮಹಾರಾಜ ಮಾತನಾಡಿ ಇಂದಿನ ಸಮಯದಲ್ಲಿ ಜನರು ಹಣ ಗಳಿಸುವುದಕ್ಕೆ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ, ಮತ್ತೆ ಆರೋಗ್ಯ ಸರಿಪಡಿಸಿಕೊಳ್ಳಲು ಗಳಿಸಿದ ಹಣ ಖರ್ಚು ಮಾಡಿಕೊಳ್ಳುತ್ತಿದ್ದಾರೆ. ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡವೆಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಯುವ ಮುಖಂಡರಾದ ವೀರೇಶ ಬಿರಾದಾರ, ಶಿವಲಿಂಗಪ್ಪ ಟೆಂಗಳಿ, ಖ್ಯಾತ ಸಂಗೀತ ಕಲಾವಿದ ಸಂಗಮೇಶ ಶಾಸ್ತ್ರಿ ಮಾಶಾಳ, ಡಾ. ಜಿಲಾನಿ ಖಾನ, ಡಾ, ಶಾಮವೆಲ್ ಎಡಿಸನ್, ಆಗಮಿಸಿದರು.

ಕಾರ್ಯಕ್ರಮದಲ್ಲಿ ಲಕ್ಷ್ಮಿಕಾಂತ ಟೆಂಗಳಿ, ಉಮೇಶ ದೇಗಾಂವ, ರಘುನಂದನ ಕುಲಕರ್ಣಿ, ನಾಗರಾಜ ನಾಗೂರ, ನಾಗರಾಜ ತುಳಜಾಪುರ, ಹಣಮಂತರಾಯ ಮಾಳೆಗಾಂವ, ಚಂದ್ರಕಾಂತ ಮುತ್ತಗಿ, ಶಿವಶರಣಪ್ಪ ಬಿರಾದಾರ, ಹಣಮಂತರಾಯ ಅಟ್ಟೂರ, ಜ್ಯೋತಿ ಪಾಟೀಲ, ಶ್ವೇತಾ ರೆಡ್ಡಿ, ದೇವರಾಜ ಮಳ್ಳಿ, ಸಂಗೀತಾ ಪಾಟೀಲ, ಸುನಿತಾ, ಮೀನಾಕ್ಷಿ, ಶಿಲ್ಪಾ ಎಸ. ಸುಶ್ಮಿತಾ ಕುಂಬಾರ, ಆಫ್ರಿನ, ನಿವೇದಿತಾ, ಪ್ರಿಯಾಂಕ, ಓಮದೇವಿ, ಸೇರಿದಂತೆ ಅನೇಕ ಜನ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಉಪಳಾಂವ ಹಾಗೂ ಸುತ್ತಮುತ್ತಲಿನ ಅನೇಕ ಜನರು ಆರೋಗ್ಯ ತಪಾಸಣೆ ಮಾಡಿಕೊಂಡರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

35 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

42 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago