ಕಲಬುರಗಿ: ಕಲಬುರಗಿಯ ಸ್ಟೇಷನ ಬಜಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸಿ.ಟಿ. ಬಸ್ ನಿಲ್ದಾಣದ ಎದುರಿಗೆ ೨೦೧೯ರ ಆಗಸ್ಟ್ ೧೮ರಂದು ಅಂದಾಜು ೬೦ರಿಂದ ೬೫ ವರ್ಷದ ಅಪರಿಚಿತ ಮೃತ ವ್ಯಕ್ತಿಯ ಶವ ದೊರಕಿದ್ದು, ಈ ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸ ತಿಳಿದು ಬಂದಿರುವುದಿಲ್ಲ ಎಂದು ಕಲಬುರಗಿ ಸ್ಟೇಷನ ಬಜಾರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.
ಈ ಮೃತ ವ್ಯಕ್ತಿಯ ವಾರಸುದಾರರು ಯಾರು ಇರುವುದಿಲ್ಲ. ಮೃತ ವ್ಯಕ್ತಿಯ ಮೈ ಮೇಲೆ ಬಿಳಿಯ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಇರುತ್ತದೆ. ವ್ಯಕ್ತಿಯ ತಲೆಯ ಮೇಲೆ ಕಪ್ಪು ಮತ್ತು ಬಿಳಿ ವಿಶ್ರಿತ ತಲೆಕೂದಲು, ಗಡ್ಡ ಮತ್ತು ಮಿಸೆ ಬಿಳಿ ಮಿಶ್ರಿತ ಕೂದಲು ಇರುತ್ತದೆ. ತೆಳ್ಳನೇಯ ಮೈಕಟ್ಟು, ಕಂದು ಮೈಬಣ್ಣ ಇರುತ್ತದೆ. ಅಂದಾಜು ೫.೩ ಎತ್ತರ ಇರುತ್ತದೆ.
ಈ ಮೃತ ವ್ಯಕ್ತಿಯ ಶವವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮರ್ಚರಿ ಕೋಣೆಯಲ್ಲಿ ಇಡಲಾಗಿದೆ. ಈ ಅಪರಿಚಿತ ವ್ಯಕ್ತಿಯ ಬಗ್ಗೆ ಈವರೆಗೆ ಯಾರೂ ವಾರಸುದಾರರು ಬಂದಿರುವುದಿಲ್ಲ. ಈ ಮೃತ ವ್ಯಕ್ತಿಯ ಯಾರಾದರೂ ಸಂಬಂಧಿಕರು, ವಾರಸುದಾರರು ಇದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಸ್ಟೇಶನ್ ಬಜಾರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08472-263616 ಅಥವಾ ಆರಕ್ಷಕ ನಿರೀಕ್ಷಕರ ಮೊಬೈಲ್ ಸಂಖ್ಯೆ9480803546ಗೆ ಸಂಪರ್ಕಿಸಲು ಕೊರಲಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…