ಚಿತ್ತಾಪುರ: ಮನುಕುಲದ ಒಳಿತಿಗಾಗಿ ಎಲ್ಲರೂ ಸೇರಿ ಗಿಡ ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ನಾಲವಾರ ಕೊರಿಸಿದ್ದೇಶ್ವರ ಮಠದ ತೋಟೆಂದ್ರ ಮಹಾಸ್ವಾಮಿಗಳು ನುಡಿದಿದ್ದಾರೆ.
ನಾಗರ ಅಮಾವಾಸ್ಯೆ ಪ್ರಯುಕ್ತ ಶ್ರೀಮಠದಲ್ಲಿ ಸೋಮವಾರ ರಾತ್ರಿ ನಡೆದ ಮಾಸಿಕ ಶಿವಾನುಭವ ಚಿಂತನ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಕಾಡನ್ನು ನಾಶಮಾಡುತ್ತಿದ್ದಾನೆ.ಇದರಿಂದ ಪರಿಸರ ಅಸಮತೋಲನ ಉಂಟಾಗುತ್ತಿದೆ.ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಹೆಚ್ಚಾಗಿ ಓಜೋನ್ ಪದರನ್ನು ಹಾಳು ಮಾಡುತ್ತಿದ್ದೆ.ಹೀಗೆ ಮುಂದುವರೆದಿದೆ ಮನುಷ್ಯ ಜೀವನ ಮಾಡುವುದು ಕಷ್ಟವಾಗುತ್ತದೆ.ಪ್ರತಿಯೊಬ್ಬರು ಮರಗಳನ್ನು ಬೆಳೆಸಬೇಕು ಜೊತೆಗೆ ಕಾಡನ್ನು ಸಂರಕ್ಷಣೆ ಮಾಡಬೇಕು.ಕನಿಷ್ಠ ವರ್ಷಕ್ಕೆ ಒಂದು ಮರವನ್ನಾದರು ಬೆಳೆಸುವ ಹವ್ಯಾಸ ಬೆಳೆಸಿಕೊಳ್ಳಬೇಕು.ಕೃಷಿಯಲ್ಲಿ ಹೆಚ್ಚಿನ ರಾಸಾಯನಿಕ ಗೊಬ್ಬರ ಬಳಸದೆ ಸಾಯಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಬೀದರನ ಪರಿಸರ ವಾಹಿನಿ ಸಂಸ್ಥೆಯ ಅಧ್ಯಕ್ಷ ಶೈಲೇಂದ್ರ ಕವಡೆ ಮಾತನಾಡಿ ಕಲಬುರ್ಗಿ ಜಿಲ್ಲೆಯಲ್ಲಿ ಶೇ.3%ಮಾತ್ರ ಅರಣ್ಯವಿದೆ.ಹೆಚ್ಚು ಹೆಚ್ಚು ಗಿಡ ನೆಡುವ ಮೂಲಕ ಪರಿಸರವನ್ನು ಕಾಪಾಡೋಣ ಎಂದರು.
ಕಾರ್ಯಕ್ರಮದಲ್ಲಿ ರೈತರಿಗೆ ವಿವಿಧ ಬಗೆಯ ಸಸಿಗಳನ್ನು ವಿತರಣೆ ಮಾಡಲಾಯಿತ್ತು.ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಹದೇವ ಗವ್ಹಾರ,ಗೋಪಾಲ ರಾಠೋಡ,ನಾಗರೆಡ್ಡಿ ಗೋಪಸೆನ್,ಶಿವರೆಡ್ಡಿ ಕುಲಕುಂದಿ, ಬಸವಂತರಾವ್ ಪಾಟೀಲ್, ಈರಣ್ಣ ಇಂಗಳಗಿ ಸೇರಿದಂತೆ ನೂರಾರು ಭಕರು ಇದ್ದರು. ವಿರೂಪಾಕ್ಷಯ್ಯ ಸ್ವಾಮಿ ಹಾಗೂ ಕು.ತೃಪ್ತಿ ಪಾಟೀಲ್ ತುನ್ನೂರ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…