ಕಲಬುರಗಿ: ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ ಎಂದು ಆಕೆಯ ತಂದೆ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಪ್ರಾಪ್ತ ಬಾಲಕಿಯ ಶವ ಗ್ರಾಮವೊಂದರ ಬಾವಿಯಲ್ಲಿ ಸಿಕ್ಕಿದ್ದು, ಜಲಚರಗಳು ಮುಖದ ಭಾಗವನ್ನು ತಿಂದಿದ್ದರಿಂದ ವಿಕಾರವಾಗಿದೆ. ಅತ್ಯಾಚಾರ, ಕೊಲೆ ಶಂಕೆ ಮೇಲೆ ಅದೇ ಗ್ರಾಮದ ವ್ಯಕ್ತಿಯೊಬ್ಬನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆ ವ್ಯಕ್ತಿಯು ಹಿಂದೆಯೂ ಇಂತಹ ಕೃತ್ಯದಲ್ಲಿ ಭಾಗಿಯಾಗಿ, ಜೈಲು ಶಿಕ್ಷೆಗೂ ಗುರಿಯಾಗಿದ್ದ ಎನ್ನಲಾಗುತ್ತಿದೆ.
ಶನಿವಾರ ಶಾಲೆ ಮುಗಿಸಿಕೊಂಡು ಪಕ್ಕದ ಗ್ರಾಮದ ಚಿಕ್ಕಮ್ಮನ ಮನೆಗೆ ತೆರಳುವುದಾಗಿ ಹೇಳಿ ಹೋದ ಬಾಲಕಿ ಮನೆಗೆ ವಾಪಸ್ ಬಂದಿರಲಿಲ್ಲ. ಭಾನುವಾರ ತಡರಾತ್ರಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ.
ಭಾನುವಾರ ಸಂಜೆ ಗ್ರಾಮದ ಹೊರವಲಯದ ಬಾವಿಯೊಂದರಲ್ಲಿ ನೀರು ಬೀಡಲು ಹೋಗಿದ್ದ ವ್ಯಕ್ತಿ ಶವವನ್ನು ನೋಡಿ ಠಾಣೆಗೆ ಮಾಹಿತಿ ನೀಡಿದರು.
ಪೊಲೀಸರು ಶವವನ್ನು ಹೊರ ತೆಗೆದರು. ಆದರೆ, ಶವದ ಮುಖ ಜಲಚರಗಳು ತಿಂದಿದ್ದರಿಂದ ಗುರುತು ಪತ್ತೆಯಾಗಲಿಲ್ಲ. ವಾಟ್ಸ್ಆ್ಯಪ್ ಮೂಲಕ ಶವದ ಫೋಟೊ ತಾಲ್ಲೂಕಿನಾದ್ಯಂತ ಹರಿದಾಡಿದರೂ ಗುರುತು ತಿಳಿದು ಬರಲಿಲ್ಲ. 8ನೇ ತರಗತಿ ಓದುತ್ತಿರುವ ಬಾಲಕಿಯ ಅಣ್ಣನು ಆಕೆ ಧರಿಸಿದ್ದ ಟೀ ಶರ್ಟ್ ಗುರುತು ಹಿಡಿದ’ ಎಂದರು.
ಪ್ರತಿಭಟನೆ: ಪ್ರಕರಣದ ಸಬ್ಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸೋಮವಾರ ಸಂಜೆ ವೇಳೆ ಕುರುಬ ಸಮಾಜದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಎಸ್.ಪಿ ಭೇಟಿ: ಇಂದು ನಿಂಬರ್ಗಾ ಪೊಲೀಸ್ ಠಾಣೆಗೆ ಕಲಬುರಗಿ ಎಸ್.ಪಿ ಈಶಾ ಪಂತ್ ಭೇಟಿ ನೀಡಿ ಘಟನೆ ಕುರಿತು ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದ್ದಿದ್ದಾರೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…