ಕಲಬುರಗಿ: ದ್ವಿಚಕ್ರವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೇಡಂ ಠಾಣೆಯ ಪೋಲಿಸರು ಅಂತರ್ರಾಜ್ಯ ಕಳ್ಳನಿಗೆ ಬಂಧಿಸಿದ್ದಾರೆ. ಬಂದಿತನಿಗೆ ತಾಂಡೂರ್ ಗುಮಾಸ್ತ್ ನಗರ ಮೂಲದ ಹಾಲಿ ವಸ್ತಿ ಕಾಳಗಿ ಪಟ್ಟಣದ ವಡ್ಡರಗಲ್ಲಿಯ ನಿವಾಸಿ ಸಾಹೇಬ್ ಪಟೇಲ್ ತಂದೆ ಮಹಿಬೂಬ್ಸಾಬ್ ಬಾರಾಮನಿ (೪೦) ಎಂದು ಗುರುತಿಸಲಾಗಿದೆ.
ಬಂಧಿತನಿಂದ ಸೇಡಂ ಪಟ್ಟಣ ಹಾಗೂ ನೆರೆಯ ತೆಲಂಗಾಣ್ ರಾಜ್ಯದ ತಾಂಡೂರು, ಬಸಿರಾಬಾದ್ ಹಾಗೂ ಇತರೆಡೆಗಳಲ್ಲಿ ಕಳ್ಳತನ ಮಾಡಿದ್ದ ಸುಮಾರು ೫.೫೦ ಲಕ್ಷ ರೂ.ಗಳ ಮೌಲ್ಯದ ೧೧ ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಚರ ಸೇಡಂ ಪಟ್ಟಣದ ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ್ ತಂದೆ ಶರಣಪ್ಪ ಟೆಂಗಳಿ ಪರಾರಿಯಾಗಿದ್ದು, ಆತನ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ.
ಸೇಡಂ ತಾಲ್ಲೂಕಿನ ಯಡಗಾ ಗ್ರಾಮದ ನಾಗಪ್ಪ ತಂದೆ ಚಂದ್ರಪ್ಪ ದೇವನೂರ್ ಅವರು ಸೇಡಂ ತಾಲ್ಲೂಕು ಆಸ್ಪತ್ರೆಯಲ್ಲಿನ ಆವರಣದಲ್ಲಿ ಎರಡು ದ್ವಿಚಕ್ರವಾಹನಗಳು ಕಳ್ಳತನವಾದ ಕುರಿತು ಸೇಡಂ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಸೇಡಂ ಪೋಲಿಸ್ ಠಾಣೆಯ ಸಿಪಿಐ ಹಾಗೂ ಪಿಐ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪೃತ್ವಿರಾಜ್, ಶಿವಕುಮಾರ್, ಮನೋಹರ್, ತೋಟಯ್ಯಸ್ವಾಮಿ, ಶ್ರೀನಿವಾಸ್ ರೆಡ್ಡಿ, ಅಲ್ಲಾಭಕ್ಷ , ಆಸೀಫ್, ವಿಠಲರೆಡ್ಡಿ, ರಾಜಕುಮಾರ್ ಹಾಗೂ ಸುನೀಲಕುಮಾರ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…