ಮಣಿಪುರ ಘಟನೆ ಖಂಡಿಸಿ AIDSO ಪ್ರತಿಭಟನೆ

ವಾಡಿ: ಇಂದು ಲಾಡ್ಲಪೂರ ಗ್ರಾಮದಲ್ಲಿ ಮಣಿಪುರದಲ್ಲಿ ಇಬ್ಬರು ಹೆಣ್ಣುಮಕ್ಕಳ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರವನ್ನು AIDSO ಅತ್ಯಂತ ಉಗ್ರವಾಗಿ ಖಂಡಿಸಿ ಪ್ರತಿಭಟನೆ ಮಾಡಲಾಯಿತು.

ಈ ವೇಳೆ AIDSO ವಾಡಿ ಸ್ಥಳೀಯ ಸಮಿತಿಯ ಅಧ್ಯಕ್ಷರಾದ ವೆಂಕಟೇಶ ದೇವದುರ್ಗ ಮಾತನಾಡುತ್ತಾ, ನಡೆಯುತ್ತಿರುವ ಮಣಿಪುರದಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಗುಂಪು ಅತ್ಯಾಚಾರ ಎಸಗಿರುವ ಘಟನೆಯನ್ನು AIDSO ಅತ್ಯುಗ್ರವಾಗಿ ಖಂಡಿಸುತ್ತದೆ. ಈ ಘಟನೆಯು ನಮ್ಮಲ್ಲಿ ಅತೀವ ಸಂಕಟವನ್ನು ಉಂಟು ಮಾಡಿದೆ ಎಂದರು.

ಸಮುದಾಯದ ಹೆಸರಿನಲ್ಲಿ ಜನಗಳ  ಸಾಮೂಹಿಕ ಹತ್ಯೆ, ದಾಳಿಗಳು, ಅತ್ಯಾಚಾರ, ಗುಂಪು ಅತ್ಯಾಚಾರ ಇವುಗಳು ಮಣಿಪುರದಲ್ಲಿ ಕಳೆದ ಎರಡು ತಿಂಗಳುಗಳಿಂದ ಎಡೆಬಿಡದೆ ನಡೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ನೀತಿಗಳು, ಸಮುದಾಯಗಳ ನಡುವೆ ವಿಭಜನೆಯನ್ನು ಉಂಟು ಮಾಡಿ ಮಣಿಪುರ ಹೊತ್ತುರಿಯಲು ಕಾರಣವಾಗಿದೆ.

ಇಬ್ಬರು ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ದೇಶದ ಜನ ಆಘಾತಕ್ಕೆ ಒಳಗಾಗಿದ್ದಾರೆ. ಇಂತಹ ನೂರಾರು ಘಟನೆಗಳು ಈ ಹಿಂದೆ ಜರುಗಿವೆ ಎಂದು ಮಣಿಪುರದ ಮುಖ್ಯಮಂತ್ರಿ ನಾಚಿಕೆಯಿಲ್ಲದೆ ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅಮಾನವೀಯ ನಡವಳಿಕೆಗೆ ತುತ್ತಾದ ಹೆಣ್ಣುಮಗಳು, ಈ ಘಟನೆ ನಡೆಯುವಾಗ ನಮಗೆ ಪೊಲೀಸರಿಂದ ಸಹಾಯ ಸಿಗಲಿಲ್ಲ ಬದಲಿಗೆ, ಆರೋಪಿಗಳ ಕೈಗೆ ಅವರೇ ನಮ್ಮನ್ನು ಒಪ್ಪಿಸಿದರು ಎಂದು ಅತ್ಯಂತ ನೋವಿನಿಂದ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಪ್ರಕ್ಷೋಭೆಯನ್ನು ಬಿಜೆಪಿ ಸರ್ಕಾರ ಹೇಗೆ ನಿಭಾಯಿಸಿದೆ ಎನ್ನುವುದಕ್ಕೆ ಆ ಹೆಣ್ಣುಮಕ್ಕಳ ಸ್ಥಿತಿಯೇ ಸಾಕ್ಷಿಯಾಗಿದೆ. ಸರ್ಕಾರವು ತನ್ನ ಅಜೆಂಡಾವನ್ನು ಮುಂದುವರಿಸಲು, ವೈಷಮ್ಯವನ್ನು ಸೃಷ್ಟಿಸಿ, ಆ ಮೂಲಕ ಸಮುದಾಯಗಳ ನಡುವಿನ ವಿಭಜನೆಯನ್ನು ಪ್ರೋತ್ಸಾಹಿಸಿದ್ದಾರೆ. ಸರ್ಕಾರದಿಂದ ಸಾಂತ್ವನದ ಮಾತುಗಳು ಅತ್ಯಂತ ಸಾಮಾನ್ಯ ರೀತಿಯದ್ದಾಗಿದ್ದು, ವಿಳಂಬವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮುದಾಯದ ಹೆಸರಿನಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಪ್ರತಿಯೊಂದು ಹಿಂಸಾಚಾರಗಳು ಮಾನವೀಯತೆ ನಾಚಿಕೆ ಪಡುವಂತಹ ಸಂಗತಿಯಾಗಿದೆ. ಇವು ಸ್ವಯಂಪ್ರೇರಿತವಾಗಿ ನಡೆಯುವ ಘರ್ಷಣೆಗಳಲ್ಲ ಬದಲಿಗೆ ಆಳುವ ವರ್ಗದ ಕೈವಾಡ. ನೇತಾಜಿಯವರ ಐಎನ್‌ಎಯನ್ನು ಅಪಾರ ಗೌರವ ಮತ್ತು ದೇಶಭಕ್ತಿಯಿಂದ ಸ್ವಾಗತಿಸಿದ ರಾಜ್ಯ ಇಂತಹ ಸ್ಥಿತಿಗೆ ಬಂದಿರುವುದು ನೋವಿನ ಸಂಗತಿ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಐಎನ್‌ಎ ಸೈನಿಕರನ್ನು ಬೆಂಬಲಿಸಲು ಆ ನೆಲವು ಮಾನವೀಯತೆಯಿಂದ ಒಗ್ಗೂಡಿತ್ತು. ಇಂದಿಗೂ ದೇಶದ ಜನರು ನೇತಾಜಿಯನ್ನು ತಮ್ಮ ಹೃದಯದಲ್ಲಿ ಗೌರವಯುತವಾಗಿ ಇಟ್ಟುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾನವತೆಯನ್ನು ಉಳಿಸಲು ಜನರೆಲ್ಲ ಮುಂದೆ ಬರಬೇಕೆಂದು  ಮನವಿ ಮಾಡಿದರು. ಜನರಲ್ಲಿ ಒಡಕುಗಳನ್ನು ಸೃಷ್ಟಿಸುವ ಸರ್ಕಾರಗಳ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು AIDSO ಇಡೀ ಸಮಾಜಕ್ಕೆ ಕರೆ ನೀಡುತ್ತದೆ ಮತ್ತು ನಾಗರಿಕತೆಯನ್ನು ಉಳಿಸಲು ಮಣಿಪುರದ ಮಾನವೀಯತೆಯನ್ನು ಪ್ರೀತಿಸುವ ಜನರನ್ನು ಒತ್ತಾಯಿಸುತ್ತದೆ ಎಂದು ಹೇಳಿದರು.

AIDSO ಜಿಲ್ಲಾ ಸಮಿತಿ ಸದಸ್ಯರಾದ ಗೋದಾವರಿ ಕಾಂಬಳೆ, ಸದಸ್ಯರಾದ ಸಿದ್ದಾರ್ಥ್ ತಿಪ್ಪನೂರ್, ವಿದ್ಯಾರ್ಥಿಗಳಾದ ಚೇತನ, ಭಾಗ್ಯಶ್ರೀ, ಭಾಗಮ್ಮ, ಮಲ್ಲಿಕಾರ್ಜುನ, ಆಕಾಶ, ಸಿಂದು, ಸಾಬಣ್ಣ, ಶಿವಲಿಲಾ ಹಾಗೂ ಮಹಿಳಾ ನಾಯಕರಾದ ಜಯಶ್ರೀ, ರೈತ ನಾಯಕರಾದ ಗುಂಡಣ್ಣ ಕುಂಬಾರ ಉಪಸ್ಥಿತರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

3 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420