ಇಂದ್ರಧನುಷ್ ಅಭಿಯಾನ ಸಭೆ ನಾಳೆ; ಡಾ. ಆರ್.ವಿ ನಾಯಕ

0
14

ಸುರಪುರ :ಇಂದ್ರಧನುಷ್ ಅಭಿಯಾನ ಕಾರ್ಯಕ್ರಮ ಅನುಷ್ಠಾನದ ಸಂಬಂಧ ತಾಲೂಕು ಚಾಲನಾ ಸಮಿತಿ ಸಭೆಯನ್ನು ನಗರದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಾಳೆ ಸೋಮವಾರ ಬೆಳಗ್ಗೆ 12 ಗಂಟೆಗೆ ಕರೆಯಲಾಗಿದ್ದು, ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಹೇಳಿದ್ದಾರೆ.

ತೀವ್ರ ತರಹ ಇಂದ್ರಧನುಷ್ ಅಭಿಯಾನ ಕಾರ್ಯಕ್ರಮ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ-2023 ಮೂರು ತಿಂಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕ್ರಮ ಇದಾಗಿದೆ. ಆಗಸ್ಟ್ 7 ರಿಂದ ಸೆಪ್ಟೆಂಬರ್ 12 ರವರೆಗೆ ಜರುಗಲಿದೆ. ಇದರ ಯಶಸ್ವಿ ಅನುಷ್ಠಾನ ಸಂಬಂಧ ಈ ಸಭೆ ಕರೆಯಲಾಗಿದ್ದು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here