ಹೊದಲೂರ ಗ್ರಾ.ಪಂ ಗೆಲುವಿನ ನಗೆ ಬೀರಿದ ಬಿಜೆಪಿ ಬೆಂಬಲಿಗರು

ಆಳಂದ; ತಾಲೂಕಿನ ಹೊದಲೂರ ಗ್ರಾ.ಪಂ.ನ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಮತ್ತೆ ಆಯ್ಕೆಯಾಗುವುದರ ಮೂಲಕ ಗೆಲುವಿನ ನಗೆ ಬೀರಿದರು.

ಸೋಮವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಗಿರಿಮಲ್ಲ ರಾಠೋಡ, ಉಪಾಧ್ಯಕ್ಷರಾಗಿ ಶ್ರೀದೇವಿ ರಾಮಾನಂದ ಕಾಮಶೆಟ್ಟಿ, ಆಯ್ಕೆಯಾಗಿದ್ದಾರೆ. 21 ಸದಸ್ಯ ಬಲದ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗಿರಿಮಲ್ಲ ರಾಠೋಡ, ರೂಪಾವತಿ ಪಾತ್ರೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ರಾಮಾನಂದ ಕಾಮಶೆಟ್ಟಿ, ಆಶಾ ಬೇಗಂ ನಾಮಪತ್ರ ಸಲ್ಲಿಸಿದ್ದರು.

ಗಿರಿಮಲ್ಲ ರಾಠೋಡ ಮತ್ತು ಶ್ರೀದೇವಿ ರಾಮಾನಂದ ಕಾಮಶೆಟ್ಟಿ ತಲಾ 16 ಮತ ಪಡೆದು ಗೆಲುವಿನ ನಗೆ ಬೀರಿದರು. ಚುನಾವಣಾಧಿಕಾರಿ ವಿಲಾಸರಾಜ್ ಪ್ರಸನ್ನ ಪ್ರಕ್ರಿಯೆ ನಡೆಸಿಕೊಟ್ಟರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಾಗೇಶಮೂರ್ತಿ ಸಾಥ್ ನೀಡಿದರು.

ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲ ಎರಚಿ ಸಂಭ್ರಮಿಸಿದರು.

ಮುಖಂಡರಾದ ಭೀಮಾಶಂಕರ ಕಲಶೆಟ್ಟಿ, ರಮೇಶ ಮಂಠಾಳೆ, ಪ್ರಭುಲಿಂಗ ಪಾಟೀಲ ಸಿದ್ರಾಮಪ್ಪ ನೀಲೇಗಾರ, ಕಲ್ಯಾಣಿ ಮೂಲಗೆ, ವಿಜಯಾನಂದ ಕಾಮಶೆಟ್ಟಿ, ಗೌತಮ ಭುರಲೆ, ರವಿ ವಾಲಿಕಾರ, ಮಹಾದೇವ ಅಲಗೂಡೆ, ನಾಗರಾಜ ಪಾಟೀಲ, ಉಮೇಶ ಸ್ವಾಮಿ, ಮಹೇಶ ಖಜೂರೆ, ಧನರಾಜ ಮಂಠಾಳೆ, ಬಸವರಾಜ ಗಂಗನೆ, ಸಿದ್ದಾರಾಮ ಕರ್ಪೆ, ಸಿದ್ದಾರಾಮ ಅಲಗೂಡೆ, ಬಸವರಾಜ ಚಪ್ಟೆ, ಬಂಡಪ್ಪ ಬಾಲಖೇಡೆ, ಮಹೇಶ ಕವಲಗಾ, ರಾಮಾನಂದ ಕಾಮಶೆಟ್ಟಿ, ಮಹೇಶ ಪಾಟೀಲ, ಸಿದ್ದಾರಾಮ ಬನಶೆಟ್ಟಿ, ವೀರಭದ್ರ ಖೂನೆ, ಕುಮಾರೇಶ ಸ್ವಾಮಿ, ನಾಗರಾಜ ನೀಲೇಗಾರ, ದಯಾನಂದ ಮಾಳಗೆ, ಈಶ್ವರ ಮಂಠಾಳೆ, ಹಣಮಂತ ಕಲಶೆಟ್ಟಿ, ರಾಜೇಂದ್ರ ಕಾಮಶೆಟ್ಟಿ, ಸುನೀಲ ರಾಠೋಡ, ಸಂತೋಷ ಚವ್ಹಾಣ, ಶಿವರಾಮ ರಾಠೋಡ, ಶಿವಾಜಿ ಚವ್ಹಾಣ, ಸುರೇಶ ಚವ್ಹಾಣ ಸೇರಿದಂತೆ ನೂರಾರು ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

43 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

6 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420