ಬಿಸಿ ಬಿಸಿ ಸುದ್ದಿ

ತಾಲೂಕಿನಾದ್ಯಂತ ಆಗಸ್ಟ್ 7 ರಿಂದ 12ರ ವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ

ಸುರಪುರ: ಇಂದ್ರಧನುಷ್ ಲಸಿಕೆ ಅಭಿಯಾನದ ಅಂಗವಾಗಿ ನಗರದ ತಗಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, ಇಂದ್ರಧನುಷ್ ಲಸಿಕೆ ಅಭಿಯಾನ ಮಕ್ಕಳಿಗೆ ಹಾಗೂ ಗರ್ಭಿಣಿ ಸ್ತ್ರೀಯರಿಗೆ ತುಂಬಾ ಮುಖ್ಯವಾಗಿದ್ದು ಇದರ ಯಶಸ್ಸಿಗೆ ಎಲ್ಲರು ಸಹಕರಿಸುವಂತೆ ತಿಳಿಸಿದರು.

ಎಲ್ಲಾ ಗ್ರಾಮ ಪಂಚಾಯತಿ ಸಿಬ್ಬಂದಿಗಳು,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು,ಆಶಾ ಕಾರ್ಯಕರ್ತೆಯರು,ಶಾಲಾ ಶಿಕ್ಷಕರು ಹಾಗೂ ಮಕ್ಕಳು ಈ ಅಭಿಯಾನದ ಯಶಸ್ಸಿಗಾಗಿ ಆಗಸ್ಟ್ 5 ಮತ್ತು 6 ರಂದು ಎರಡು ದಿನಗಳ ಕಾಲ ಆಯಾ ಗ್ರಾಮಗಳಲ್ಲಿ ಪ್ರಭಾತ್ ಪೇರಿ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲು ಭಾಗವಹಿಸುವಂತೆ ತಿಳಿಸಿದರು.ಅಲ್ಲದೆ ಜೆಸ್ಕಾಂ ಇಲಾಖೆ ಆಗಸ್ಟ್ 7 ರಿಂದ 12ರ ವರೆಗೆ ದಿನದ 24 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ತಿಳಿಸಿದರು.

ನಗರಸಭೆಯಿಂದ ವಾಹನಗಳ ಮೂಲಕ ಈ ಅಭಿಯಾನದ ಬಗ್ಗೆ ನಿತ್ಯವು ಪ್ರಚಾರ ಮಾಡುವಂತೆ ಸೂಚಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಮಾತನಾಡಿ,ಇಂದ್ರಧನುಷ್ ಅಭಿಯಾನ ಇದೇ ಆಗಸ್ಟ್ 7 ರಿಂದ 12ನೇ ತಾರೀಖಿನ ವರೆಗೆ ನಡೆಯಲಿದೆ.ಒಟ್ಟು 3 ತಿಂಗಳುಕಾಲ ಈ ಅಭಿಯಾನ ನಡೆಯಲಿದೆ. ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಒಟ್ಟು 16 ನಗರ,ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಅಭಿಯಾನ ನಡೆಯಲಿದೆ.

ಈಗಾಗಲೇ ಪ್ರತಿ ಗ್ರಾಮಗಳಲ್ಲಿ ಇರುವ ಲಸಿಕೆಯಿಂದ ಹೊರಗುಳಿದ ಮಕ್ಕಳ ಸರ್ವೇ ಮಾಡಲಾಗುತ್ತಿದೆ.ಇನ್ನೆರಡು ದಿನಗಳಲ್ಲಿ ಮಕ್ಕಳು ಎಷ್ಟಿದ್ದಾರೆ ಎನ್ನುವ ಮಾಹಿತಿ ದೊರೆಯಲಿದೆ,ಈ ಅಭಿಯಾನದ ಅಡಿಯಲ್ಲಿ 0 ದಿಂದ 1 ವರ್ಷ,1 ರಿಂದ 2 ವರ್ಷ ಹಾಗೂ 2 ರಿಂದ 6 ವರ್ಷಗಳ ವರೆಗಿನ ಮಕ್ಕಳಿಗೆ ಎಮ್.ಆರ್ ಲಸಿಕೆ ನೀಡಲಾಗುತ್ತದೆ,ಅಲ್ಲದೆ ಗರ್ಭಿಣಿ ಮಹಿಳೆಯರಿಗೆ ಟಿ.ಟಿ 1 ಮತ್ತು ಟಿ.ಟಿ 2 ಲಸಿಕೆ ನೀಡಲಾಗುತ್ತದೆ.ಈ ಅಭಿಯಾನ ದಿಂದ ಮಕ್ಕಳಿಗೆ ನೀಡುವ ಲಸಿಕೆಯಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗ್ರಾಮೀಣ ಭಾಗದಲ್ಲಿ ಕರೆಯುವ ಗೊಬ್ಬರ,ಒಟ್ಟು ಎನ್ನುವ ಚರ್ಮದ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲು ಸಹಾಯವಾಗಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರಿ,ನಗರಸಭೆ ನೈರ್ಮಲ್ಯ ನಿರೀಕ್ಷಕ ಶಿವಪುತ್ರ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ಗುರುದೇವಿ ಹಿರೇಮಠ ಸೇರಿದಂತೆ ಜೆಸ್ಕಾಂ ಇಲಾಖೆ,ತಾಲೂಕು ಪಂಚಾಯತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago