ಭಾರೀ ಮಳೆ ಸಂಭವ, ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

0
19

ಕಲಬುರಗಿ: ಹವಾಮಾನ ಇಲಾಖೆಯ ವರದಿ ಪ್ರಕಾರ ಇಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಮಳೆಯಿಂದ ಯಾವುದೇ ಅಹಿತಕರ ಘಟನೆ ಸಂಭವಿಸದ ಹಾಗೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವರಾದ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಭಾರಿ ಮಳೆ ಬೀಳುವ ಸಂಭವಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

Contact Your\'s Advertisement; 9902492681

” ಇಡೀ ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರೂ ಕೂಡಾ ಮುನ್ನೆಚ್ಚರಿಕೆ ವಹಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಮಳೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಖರ್ಗೆ ಟ್ವಿಟ್ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here