ಸುರಪುರ:ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಸಜ್ಜನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ ನರೇಗಾ,ಪ್ರಧಾನ ಮಂತ್ರಿ ಅವಾಸ್ ಯೋಜನೆ, ಸ್ಟಾಪ್ ರಿಜಿಸ್ಟರೇಷನ, ಹಾಗೂ ಹಲವು ವಿಷಯಗಳ ಕುರಿತು ಪ್ರಗತಿ ಪರಿಶೀಲನ ಸಭೆ ಜರುಗಿತು.
ಈ ಸಭೆಗೆ ವಿಶೇಷವಾಗಿ ತಹಶೀಲ್ದಾರ್ ತಿಸುಬ್ಬಣ್ಣ ಜಮಖಂಡಿ ರವರು ಭಾಗವಹಿಸಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಹಾನಿಯಾಗಿದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿಲೇಜ್ ಅಕೌಂಟೆಂಟ್, ಜಂಟಿಯಾಗಿ ವರದಿ ಸಲ್ಲಿಸಲು ತಿಳಿಸಿದರು,
ಇ.ಓ ಬಸವರಾಜ ಸಜ್ಜನ್ ಮಾತನಾಡಿ ನರೇಗಾದಲ್ಲಿ ಕಾಮಗಾರಿಗುಚ್ಛ ಹಾಗೂ ಕ್ರಿಯಾಯೋಜನೆ ಇರಲೇಬೇಕು, ಅನುಷ್ಠಾನ ಮಾಡಿದ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಂಬಂಧಿಸಿದ ತಾಂತ್ರಿಕ ಸಹಾಯಕರು ಭೇಟಿ ನೀಡಿ, ಪರಿಶೀಲನೆ ಮಾಡಬೇಕು. ಕಾಮಗಾರಿ ಮಾಹಿತಿ ಹೊಂದಿದ ನಾಮಫಲಕ ಕಾಮಗಾರಿ ಸ್ಥಳದಲ್ಲಿರಬೇಕು. ಅನುಷ್ಠಾನ ಮಾಡಿದ ಕಾಮಗಾರಿಗೆ ಸಂಬಂಧಿಸಿದ 21ಅಂಶಗಳನ್ನು ಒಳಗೊಂಡ ಕಡತ ಸಿದ್ಧಪಡಿಸಿ, ಕಾಮಗಾರಿ ಪೂರ್ಣಗೊಳಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ರವಿಚಂದ್ರ ರಡ್ಡಿ, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು ತಾಪಂ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರಾದ ಶಿವಯೋಗಿ ಹಿರೇಮಠ, ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು (ಸಾಮಾಜಿಕ ಪರಿಶೋಧನೆ), ತಾಲೂಕ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ತಾಂತ್ರಿಕ ಸಹಾಯಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…