ಸುರಪುರ:ನಗರದ ರಂಗಂಪೇಟೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಆಂಗ್ಲಾ ಮಾಧ್ಯಮ ಶಾಲೆಯ ಕಟ್ಟಡದ ಮತ್ತು ಬೀಚ್ ಮೊಹಲ್ಲಾದ ಕರ್ನಾಟಕ ಪಬ್ಲಿಕ್ ಶಾಲೆಯ ಉರ್ದು ಶಾಲೆಯ ಕೋಣೆಗಳ ಮೇಲ್ಛಾವಣಿ ಶಿಥಿಲಗೊಂಡಿದ್ದು ಮಕ್ಕಳ ಮೇಲೆ ಬೀಳುವ ಸಾಧ್ಯತೆ ಇದೆ. ಇದರಿಂದ ಮಕ್ಕಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದ್ದು ಕೂಡಲೇ ಈ ಶಾಲಾ ಕೋಣೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ,ತಾಲೂಕು ಸಂಚಾಲಕ ಬಸವರಾಜ ದೊಡ್ಮನಿ,ರವಿಂಚದ್ರ ಬೊಮ್ಮನಹಳ್ಳಿ,ಮಾನಪ್ಪ ಬಿಜಾಸಪುರ,ಹಣಮಂತ ಬಾಂಬೆ,ರಾಮಣ್ಣ ಶೆಳ್ಳಗಿ,ಜೆಟ್ಟೆಪ್ಪ ನಾಗರಾಳ,ಖಾಜಾಹುಸೇನ ಗುಡಗುಂಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.