ಕಲಬುರಗಿ; ಸ್ವಾಮಿ ವಿವೇಕಾನಂದ ನಗರದಲ್ಲಿನ ಶ್ರೀಮತಿ ಕಸ್ತೂರಿಬಾಯಿ ಪಿ ಬುಳ್ಳಾ ಸಾಂಸ್ಕøತಿಕ ಸಭಾ ಭವನದಲ್ಲಿ ನಾಳೆ ಸಾಯಂಕಾಲ 5 ಕ್ಕೆ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ದರ್ಜೆ ಗುತ್ತೇದಾರ ಲಕ್ಷ್ಮೀಕಾಂತ ಜಮಾದಾರ ಉದ್ಘಾಟಿಸುವರು. ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿಯ ಗೌರವಾಧ್ಯಕ್ಷ ಡಾ.ಬಿ.ಪಿ.ಬುಳ್ಳಾ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರೌಢಶಾಲೆ ಮುಖ್ಯ ಗುರುಶಾಂತಪ್ಪ ಕೆ ಹೇರೂರ, ಕರ್ನಾಟಕ ರಾಜ್ಯ ಗಂಗಾಮಾತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಉಪಾಧ್ಯಕ್ಷ ಹೊನ್ನಪ್ಪ ಪಟೇದ, ರಾಜ್ಯ ಕೋಲಿ ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ಕೋಶ್ಯಾಧ್ಯಕ್ಷ ಶಿವಕುಮಾರ (ಪಿಂಟು) ಜಮಾದಾರ, ಶ್ರೀ ಕೋಕಿಲಾ ಪರಮೇಶ್ವರಿ ದೇವಸ್ಥಾನ ಕಮಿಟಿಯ ಅಧ್ಯಕ್ಷ ಮಲ್ಲಿಕಾರ್ಜುನ ಜೋಕೆ ಆಗಮಿಸುವರು.
ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಾರ್ಯಾಧ್ಯಕ್ಷ ಸೈಬಣ್ಣಾ ಕೆ ವಡಗೇರಿ ಹಾಗೂ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿಯ ಉಪಾಧ್ಯಕ್ಷ ರಾಮಲಿಂಗ ನಾಟೀಕಾರ ಇವರು ಗೌರವ ಉಪಸ್ಥಿತಿ ವಹಿಸುವರು, ನಿವೃತ್ತ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ.ರಾಘವೇಂದ್ರ ಗುಂಡಗುಂಟಿ, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಶಾರದಾದೇವಿ ಕರ್ಣ ಬಿರಾದಾರ, ಪ್ರೌಢಶಾಲಾ ಮುಖ್ಯೋಪಾಧ್ಯರ ಸಂಘದ ಅಧ್ಯಕ್ಷ ಮರೇಪ್ಪ ಮಿಣಜಿಗಿ, ಕೆಎಂಎಫ್ ವಿಸ್ತರಣಾ ಅಧಿಕಾರಿ ಸುನಿತಾ ರಾಮಲಿಂಗ ನಾಟೀಕಾರ, ಡಾಕ್ಟರೇಟ್ ಪದವಿ ಪಡೆದ ಡಾ.ಕಾಶಮ್ಮಾ ಯಲ್ಲಾಲಿಂಗ ಇವರನ್ನು ವಿಶೇಷ ಸನ್ಮಾನಿಸುವರು ಎಂದು ಸಂಘದ ಪ್ರಧಾನ ಯಲಾಲಿಂಗ ಕೋಬಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…