ಬಿಸಿ ಬಿಸಿ ಸುದ್ದಿ

ಖರ್ಗೆಗೆ ಅರಗ ಜ್ಞಾನೇಂದ್ರ ಕ್ಷಮೆಯಾಚಿಸಬೇಕು: ಸಂಗಾವಿ

ಕಲಬುರಗಿ: ಮಾಜಿ ಸಚಿವ ಅರಗ ಜ್ಞಾನೇಂದ್ರ ಇವರು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಲಘುವಾಗಿ ಅವಹೇಳನ ಮಾತನಾಡಿದ್ದನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಕೆ. ಸಂಗಾವಿ ರವರು ತೀವ್ರವಾಗಿ ಖಂಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋತು ಸುಣ್ಣವಾಗಿದ್ದು, ಸೋಲಿನ ಹತಾಶೆಯಿಂದ ಹೊರಬರಲಾರದೆ ತಲೆ ಮತ್ತು ಮನಸ್ಸಿಗೆ ಸಂಬಂದವಿಲ್ಲದಂತೆ ಹೇಳಿಕೆ ನೀಡುತ್ತಿರುವದು ನೋಡಿದರೆ ಮಾಜಿ ಗೃಹ ಸಚಿವರಾದ ಅರಗ ಜ್ಞಾನೆಂದ್ರ ಇವರಿಗೆ ಬುದ್ದಿ ಭ್ರಮಣೆಯಾಗಿದೆ ಎಂಬ ಸಂಶಯ ಕಂಡುಬರುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರದಲ್ಲಿ ಪೈಪೆÇೀಟಿ ನೀಡುವ ಸಮಬಲದ ಹಿರಿಯ, ವಿಚಾರವಂತ, ಮೇಧಾವಿ, ಮುತ್ಸದ್ಧಿ ಹಾಗೂ ಅನುಭವಿ ರಾಜಕಾರಣಿಯಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಅರಗ ಜ್ಞಾನೇಂದ್ರ ಇವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತಾ, ಈ ರೀತಿಯ ಅವಹೇಳನ ಹೇಳಿಕೆ ಮರುಕಳುಹಿಸದಂತೆ ಅರಗ ಜ್ಞಾನೇಂದ್ರ ಇವರಿಗೆ ಎಚ್ಚರಿಕೆ ಗಂಟೆಯ ಮೂಲಕ ಎಚ್ಚರಿಸುತ್ತಾ ಮಾಧ್ಯಮದ ಮುಂದೆ ಹೇಳಿಕೆ ನೀಡುವ ಮುನ್ನ ನಾಲಿಗೆ ಬಿಗಿಹಿಡಿದು ಮಾತನಾಡಲಿ, ಒಂದು ವೇಳೆ ಇದೆ ಚಾಳಿ ಮುಂದುವರಿಸಿದರೆ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಗಾವಿ ಅವರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತಾ, ಅರಗ ಜ್ಞಾನೇಂದ್ರ ಇವರು ಕೂಡಲೇ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕ್ಷಮೆಯಾಚಿಸಬೇಕೆಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago