ಅಧಿಕ ಮಾಸದ ಪುರಾಣದಲ್ಲಿ ಶ್ರೀ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಕಲ್ಯಾಣ ಮಹೋತ್ಸವ

ಕಲಬುರಗಿ: ಮಹಾತ್ಮ ಬಸವೇಶ್ವರ ನಗರದಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅಧಿಕ ಮಾಸದ ಪುರಾಣದಲ್ಲಿ ಶ್ರೀ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಕಲ್ಯಾಣ ಮಹೋತ್ಸವದ ಕಾರ್ಯಕ್ರಮಕ್ಕೆ ಪೂಜ್ಯ ಮಾತೋಶ್ರೀಯವರಾದ ಡಾ. ದಾಕ್ಷಾಯಿಣಿ ಅಮ್ಮನವರು ಆಗಮಿಸಿ ಧರ್ಮೋಪದೇಶ ಮಾಡಿದರು.

ನಾನು ಇಂದು ಸ್ವಂತಃ ಶರಣರ ಕಲ್ಯಾಣ ಮಹೋತ್ಸವನ್ನು ಕಂಡು ನನ್ನ ಕಣ್ಣುಗಳಲ್ಲಿ ಆನಂದ ಭಾಷ್ಪ ಬರತಾಯಿದೆ. ಅಪಾರವಾಗಿ ಸೇರಿರುವ ಬಸವೇಶ್ವರ ನಗರದ ಸದ್ಭಕ್ತರನ್ನು ಕಂಡು ಪುಳಕಿತಗೊಂಡಿದ್ದೇನೆ. ಶರಣಬಸವೇಶ್ವರರು 12ನೇ ಶತಮಾನದ ಕಲ್ಯಾಣವನ್ನು ಮತ್ತೆ ಕಲಬುರಗಿಯಲ್ಲಿ ಸ್ಥಾಪಿಸಿದ್ದರು. ದಾಸೋಹ ಮತ್ತು ಶಿಕ್ಷಣ ಶರಣರ ಆಚರಣೆ ಪಾಲಿಸಿಕೊಂಡು ನಾವು ಬಂದಿದ್ದೇವೆ. ಬಸವೇಶ್ವರ ನಗರದ ಜನತೆಯ ಭಕ್ತಿ ಮತ್ತು ಧರ್ಮದ ಕಾರ್ಯಕ್ರಮಗಳು ಸದಾ ಹೀಗೆ ನಡೆದುಕೊಂಡು ಬರಲಿ ಮತ್ತು ಶರಣಬಸವೇಶ್ವರರ ಕರುಣೆ ಸದಾ ತಮ್ಮ ಮೇಲೆ ಇರಲಿ ಎಂದು ತಿಳಿಸಿದರು.

ಸ್ವಾಗತ ಮತ್ತು ನಿರೂಪಣೆಯನ್ನು ಡಾ. ಸಂಗಮೇಶ ಎಸ್. ಹಿರೇಮಠ ನಿರ್ವಹಿಸಿದರು. ಗುರುಸ್ವಾಮಿಯವರು ಪ್ರಾಸ್ತಾವಿಕದಲ್ಲಿ ದೇವಸ್ತಾನ ನಡೆದು ಬಂದ ದಾರಿ ವಿವರಿಸಿದರು. ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ಬಸವರಾಜ ಶಟಗಾರ ಮತ್ತು ಅಧಿಕಮಾಸದ ಪುರಾಣದ ಅಧ್ಯಕ್ಷ ವೀರುಪಾಕ್ಷಯ್ಯ ಮಠಪತಿಯವರು ಪೂಜ್ಯ ಮಾತೋಶ್ರೀಯವರಿಗೆ ಗೌರವ ಸಮರ್ಪಣೆ ಮಾಡಿದರು.

ಡಾ. ಶ್ಯಾಮಲಾ ಶಿವಕುಮಾರ ಅವರು ಪೂಜ್ಯ ಮಾತೋಶ್ರೀ ಅವರ ಪರಿಚಯ ಮಾಡಿಕೊಟ್ಟರು. ಶಿವಕುಮಾರ ಸ್ವಾಮಿಯವರು ವಂದನಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವೇಶ್ವರ ದೇವಸ್ಥಾನ ಕಮಿಟಿಯ ಸದಸ್ಯರಾದ ಶ್ರೀಕಾಂತ ಶೆಟ್ಟಿ, ವೀರಣ್ಣ ಮರಗೋಳ, ಶಿವಶಂಕರ, ಸಿದ್ದು ಮಹಾಗಾಂವ, ಶರಣು ಗೊಬ್ಬುರ, ಮನೋಹರ, ಶಿವಾನಂದ ಯಳವಂತಿಗಿ ಕಲಾವಿದರಾದ ಪಂಡಿತ ಶಿವಬಸಯ್ಯ ಶಾಸ್ತ್ರಿಗಳು, ಶಿವಲಿಂಗಯ್ಯ ಪಠಪತಿ, ಮಲ್ಲಿಕಾರ್ಜುನ ವರನಾಳ ಸೇರಿದಂತೆ ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420