‘‘ಸಾವಯವ ಕೃಷಿ ಕುರಿತು ತರಬೇತಿ’’

0
35

ಕಲಬುರಗಿ: ಭಾರತದ ಕೃಷಿ ಕೌಶಲ್ಯ ಮಂಡಳಿ ಮತ್ತು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯ ಇವರ ಸಂಯುಕ್ತ ಆಶ್ರಯದಲ್ಲಿ 26 ದಿನಗಳ ವಸತಿ ಸಹಿತ/ರಹಿತ “ಸಣ್ಣ ಸಾವಯವ ಕೃಷಿಕ” ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನಮೂದಿಸ ವಿದ್ಯಾರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

ಪಿ.ಯು.ಸಿ ಉತ್ತೀರ್ಣರಾಗಿರಬೇಕು ಅಥವಾ ಎಸ್.ಎಸ್.ಎಲ್.ಸಿ ಉತ್ತೀರ್ಣದ ನಂತರ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ 3 ವರ್ಷಗಳ ಡಿಪ್ಲೋಮ ಪದವಿ ಪೂರ್ಣಗೊಳಿಸಿರಬೇಕು ಅಥವಾ 8ನೇ ತರಗತಿ ಉತ್ತೀರ್ಣ ಜೊತೆಗೆ 3 ವರ್ಷದ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗವುದು.

Contact Your\'s Advertisement; 9902492681

ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು 15ನೇ ಆಗಷ್ಟ್ 2023 ಒಳಗೆ ಈ ಕೆಳಕಂಡ ಮೊಬೈಲ್ ನಂಬರಗಳಿಗೆ 9480519313/9880848313 ಕರೆ ಮಾಡಿ ಹೆಸರು ನೋಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಳಂದ ರಸ್ತೆಯಲ್ಲಿರುವ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಗೆ ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here