ಸುರಪುರ: ತಾಲೂಕಿನ ತಿಂಥಣಿ ಸಮೀಪದ ಕನಕ ಗುರುಪೀಠದಲ್ಲಿ ಹಾಲುಮತ ಸಮುದಾಯದ ಸಚಿವರು ಹಾಗೂ ಶಾಸಕರುಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭಕ್ಕೆ ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಸುಪುತ್ರ ಹಾಗೂ ಮುಖಂಡ ರಾಜಾ ವೇಣುಗೋಪಾಲ ನಾಯಕ ಅವರ ನೇತೃತ್ವದಲ್ಲಿ ಸುರಪುರ ತಾಲೂಕಿನ ಕಾಂಗ್ರೆಸ್ ಮುಖಂಡರು ಸನ್ಮಾನಿಸಿ ಟಗರು ಕಾಣಿಕೆಯಾಗಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿ,ರವಿಚಂದ್ರ ಸಾಹುಕಾರ ಆಲ್ದಾಳ,ಸಂಜು ಕಾಮತ್ ಗ್ರಾ.ಪಂ ಸದಸ್ಯ ವಾಗಣಗೇರ ಸೇರಿದಂತೆ ಅನೇಕರಿದ್ದರು.