ನೇಕಾರರ ಸೇವಾ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ನಾಳೆ

0
99

ಕಲಬುರಗಿ: ಸಪ್ತ ನೇಕಾರರ ಸೇವಾ ಸಂಘದ ಹಾಗೂ ನೇಕಾರರ ಸೇವಾ ಕೇಂದ್ರದ ವತಿಯಿಂದ ಹಮ್ಮಿಕೊಂಡ ನೇಕಾರ ಸಮುದಾಯದ SSLC ಮತ್ತು PUC ವಿದ್ಯಾರ್ಥಿಗಳಿಗೆ ನಾಳೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಜಿಲ್ಲಾ ತೊಗಟವೀರ ಸಮಾಜ ಸೇವಾ ಸಂಘದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ನಾಳೆ ಸಂಜೆ.5 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ, ಸುವರ್ಣ ಸಭಾ ಭವನದಲ್ಲಿ, ಆಯೋಜಿಸಲಾಗಿದೆ.

Contact Your\'s Advertisement; 9902492681

ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಹುಡಗಿ. ಹಾಗೂ ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ನೆಲೋಗಿ, ಕೈಮಗ್ಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಪಾರ್ವತಿ ಭಾಯಿ, ಮೈದರ್ಗಿ ಮತ್ತು ಡಾ. ಪ್ರಕಾಶ ಹಾದಿಮನಿ ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಸಂಘದ ಅಧ್ಯಕ್ಷ ಶಿವಲಿಂಗಪ್ಪಾ ಅಷ್ಟಗಿ ಅಧ್ಯಕ್ಷತೆ ವಹಿಸುವರು.ಮ್ಯಾಳಗಿ ಚಂದ್ರಶೇಖರ್, ಕಾರ್ಯದರ್ಶಿ ಸಂತೋಷ್ ಗುರುಮಿಠಕಲ, ಸಹ ಕಾರ್ಯದರ್ಶಿ ರಾಜಗೋಪಾಲ ಭಂಡಾರಿ, ಖಜಾಂಚಿ, ಸಂಘದ ಸವ೯ ಸದಸ್ಯರು  ಭಾಗವಹಿಸಲಿದ್ದಾರೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here