ಬಿಸಿ ಬಿಸಿ ಸುದ್ದಿ

ಕಮಲಾಪೂರ; ಓಕಳಿ ಗ್ರಾ.ಪಂ ಪಿಡಿಓ, ಅಧ್ಯಕ್ಷರ ವಜಾಕ್ಕೆ ಒತ್ತಾಯಿಸಿ ದೂರು

ಕಲಬುರಗಿ: ಕಮಲಾಪೂರ ತಾಲೂಕಿನ ಓಕಳಿ ಗ್ರಾಮ ಪಂಚಾಯತನಲ್ಲಿ 2022-23 ಮತ್ತು 2023- 24 ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನವನ್ನು ಕಾಮಗಾರಿಯನ್ನು ಕೈಗೊಳ್ಳದ ಹಾಗೂ ಪರಿಕರಗಳನ್ನು ಖರೀದಿಸದ ಓಚರ್ ಸೃಜನ ಮಾಡಿ ಭಾರಿ ಅವ್ಯವಹಾರ ಮಾಡಿ ಹಣ ನಡೆಸಿರುವ ಪಿಡಿಓ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷೆ ವಿರದ್ಧ ಕ್ರಿಮಿಲ್ ಮೊಕದಮ್ಮೆ ದಾಖಲಿಸಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಓಕಳಿ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ವಿಜಯಕುಮಾರ ಶೆಟ್ಟಿ ಹಾಗೂ ನ್ಯಾಯವಾದಿ ಮತ್ತು ಅಂಬೇಡ್ಕರ್ ಯುವ ಸೇನೆಯ ಜಿಲ್ಲಾಧ್ಯಕ್ಷ ಮಲ್ಲಿಖಾರ್ಜುನ ತಳಕೇರಿ ಜಂಟಿಯಾಗಿ ಕಮಲಾಪೂರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಿಡಿಓ ಕರ್ತವ್ಯಕ್ಕೆ ಹಾಜರಾದಾಗಿನಿಂದ ನಿಯಮ ಬಾಹಿರವಾಗಿ 2022-23 ಮತ್ತು 2023-24 ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನವನ್ನು ಕಾಮಗಾರಿಯನ್ನು ಕೈಗೊಳ್ಳದ ಹಾಗೂ ಪರಿಕರಗಳನ್ನು ಖರೀದಿಸದ ಓಚರ್ ಸೃಜನೆ ಮಾಡಿ ಹಣ ಲಪಟಾಯಿಸಿ ಅನುದಾನ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಆರೋಪಗಳು ಕೇಳಿ ಬರುತ್ತಿವೆ.

ಇವರು ಕರ್ವಕ್ಕೆ ಹಾಜರಾಗಿ ಕೇವಲ ಆರು (6) ತಿಂಗಳಲ್ಲಿಯೇ ಆಗಸ್ಟ್ ತಿಂಗಳ ವರೆಗೆ ರೂ.41,42,297.00 (ನಲವತ್ತೊಂದು ಲಕ್ಷದ ನಲವತ್ತೇರಡು ಸಾವಿರದ ಎರಡು ನೂರ ತೊಂಬತ್ತೇಳು) ರೂಪಾಯಿ ಹಣ ನಿಯಮಬಾಹಿರವಾಗಿ ಬೇಕಾಬಿಟ್ಟಿಯಾಗಿ ಪಾವತಿಸಿದ್ದಾರೆ ಎನ್ನಲಾಗಿದೆ.

ಕ್ರಿಯಾಯೋಜನೆಗೆ ಅನುಗುಣವಾಗಿ ಪಾವತಿಸದೆ ನೇರವಾಗಿ ಓಚರ ಸೃಜನೆ ಮಾಡಿ ಹಣ ಪಾವತಿಸಿರುತ್ತಾರೆ. ಹಾಗೂ ಯಾವ ಉದ್ದೇಶಕ್ಕೆ ಹಣ ಪಾವತಿಸಲಾಗಿ ಅಂತ ನಿಖರವಾಗಿ ಮಾಹಿತಿ ನೀಡದ ಪ್ರಶ್ನಾರ್ಥಕ ಚಿನ್ನ (ಉದಾ.????????) ಬಳಸಿದ್ದಾರೆ. ವಿಧಾನ ಸಭೆ ಚುನಾವಣಾ ನೀತಿ ಸಂಹಿತೆಯಲ್ಲಿಯೂ ಕೂಡ ನೀತಿ ಸಂಹಿತೆಯ ನಿಯಮಗಳನ್ನು ಉಲಂಘಿಸಿ ಹಣ ಪಾವತಿಸಿರುತ್ತಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

4 hours ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

5 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

5 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

5 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

6 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

9 hours ago