ಕಲಬುರಗಿ: ಮುಂಬರುವ 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಇ.ವಿ.ಎಂ ವೇರ್ ಹೌಸ್ ನಲ್ಲಿ ಇದೇ ಆಗಸ್ಟ್ 12 ರಿಂದ ಇ.ವಿ.ಎಂ, ವಿವಿಪ್ಯಾಟ್ ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ತಪಾಸಣೆ (ಎಫ್.ಎಲ್.ಸಿ) ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.
ಶುಕ್ರವಾರ ತಮ್ಮ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಆಗಸ್ಟ್ 12 ರಿಂದ 28ರ ವರೆಗೆ ಒಟ್ಟು 17 ದಿನಗಳ ಕಾಲ ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪ್ರಥಮ ಹಂತದ ತಪಾಸಣೆ ಕಾರ್ಯ ಪೂರ್ಣಗೊಳಿಸಲಾಗುವುದು. ರಾಜಕೀಯ ಪಕ್ಷಗಳು ಎಫ್.ಎಲ್.ಸಿ ಕಾರ್ಯ ವೀಕ್ಷಣೆಗೆ ಓರ್ವ ಪ್ರತಿನಿಧಿಯನ್ನು ನಿಯೋಜಿಸಬಹುದಾಗಿದೆ ಎಂದರು.
ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯ 16 ಇಂಜಿನಿಯರ್ಗಳು ನಡೆಸುವ ಎಫ್.ಎಲ್.ಸಿ ಕಾರ್ಯಾಚರಣೆಯಲ್ಲಿ 4,816 ಬ್ಯಾಲೆಟ್ ಯೂನಿಟ್, 3,359 ಕಂಟ್ರೋಲ್ ಯೂನಿಟ್ ಹಾಗೂ ವಿವಿಪ್ಯಾಟ್ 3,550 ಯಂತ್ರಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಈ ಅವಧಿಯಲ್ಲಿ ಮೋಬೈಲ್, ಸ್ಮಾರ್ಟ್ ವಾಚ್ ನಿಷೇಧಿಸಲಾಗಿದೆ ಎಂದರು.
ಇನ್ನು 2023 ಸಾರ್ವತ್ರಿಕ ವಿಧಾನಸಭೆಯ ಚುನಾವಣೆಯ 40-ಚಿತ್ತಾಪೂರ ಹಾಗೂ 45-ಗುಲಬರ್ಗಾ ಉತ್ತರ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವುದರಿಂದ, ಸದರಿ ಕ್ಷೇತ್ರದ ಇ.ವಿ.ಎಂ.ಗಳನ್ನು ಹೊರತುಪಡಿಸಿ ಪರಿಶೀಲನೆ ನಡೆಸಲಾಗುವುದೆಂದು ರಾಜಕೀಯ ಪಕ್ಷಗಳಿಗೆ ಡಿ.ಸಿ. ಸ್ಪಷ್ಟಪಡಿಸಿದರು. ಇದೇ ಸಂದರ್ಭದಲ್ಲಿ ಪರಿಶೀಲನಾ ಕಾರ್ಯದ ಎಸ್.ಓ.ಪಿ. ಪ್ರತಿಗಳನ್ನು ಸಭೆಯಲ್ಲಿದ್ದ ರಾಜಕೀಯ ಪಕ್ಷಗಳ ಮುಖಂಡರಿಗೆ ನೀಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾ ತಹಶೀಲ್ದಾರ್ ಪಂಪಯ್ಯ ಸೇರಿದಂತೆ ರಾಜಕೀಯ ಪಕ್ಷದ ಮುಖಂಡರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…