ಬಿಸಿ ಬಿಸಿ ಸುದ್ದಿ

14ಕ್ಕೆ KKRDB ಅಧ್ಯಕ್ಷರಾಗಿ ಶಾಸಕ ಡಾ. ಅಜಯಸಿಂಗ್ ಅಧಿಕಾರ ಸ್ವೀಕಾರ

ಕಲಬುರಗಿ: ಕೆಕೆಆರ್‍ಡಿಬಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಆ. 11 ರ ಶುಕ್ರವಾರ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಹೂ ಗುಚ್ಛ ನೀಡಿ ಅಭಿನಂದಿಸಿದರು.

ತಮ್ಮ ಅಪಾರ ಬೆಂಬಲಿಗರೊಂದಿಗೆ ಸಿಎಂ ನಿವಾಸಕ್ಕೆ ತೆರಳಿದ್ದ ಡಾ. ಅಜಯ್ ಸಿಂಗ್ ಅವರು ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿ ತಮ್ಮ ಮೇಲೆ ಬಹು ದೊಡ್ಡದಾದಂತಹ ಜವಾಬ್ದಾರಿ ನೀಡಿದ್ದೀರಿ, ಅದನ್ನು ತಮ್ಮ ವಿಶ್ವಾಸ, ನಿರೀಕ್ಷೆಗೆ ತಕ್ಕಂತೆ ಸಮರ್ಥವಾಗಿ ನಿಭಾಯಿಸೋದಾಗಿಯೂ ಡಾ. ಅಜಯ್ ಸಿಂಗ್ ಸಿಎಂ ಸಿದ್ದರಾಮಯ್ಯನವರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ಕೆಕೆಆರ್‍ಡಿಬಿಗಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಾ. ಅಜಯ್ ಸಿಂಗ್ ಅವರಿಗೆ ಬೆನ್ನು ತಟ್ಟಿ ಶುಭಾಷಯ ತಿಳಿಸುತ್ತ ಮಂಡಳಿಯನ್ನು ಸಮರ್ಥವಾಗಿ ಮುನ್ನಡೆಸುವಂತೆ ಸಲಹೆ ನೀಡಿದ್ದಾರೆ.

ಕೆಕೆಆರ್‍ಡಿಬಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಾ. ಅಜಯ್ ಸಿಂಗ್ ಆ. 14 ರ ಸೋಮವಾರ ಕಲಬುರಗಿಯಲ್ಲಿರುವ ಮಂಡಳಿಯ ಪ್ರಧಾನ ಕಚೇರಿ ಅಭಿವೃದ್ಧಿ ಭವನದಲ್ಲಿ ಅಂದು ಬೆಳಗಿನ 11 ಗಂಟೆಗೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು, ಅಪಾರ ಅಭಿಮಾನಿಗಳು, ಜೇವರ್ಗಿ ಸೇರಿದಂತೆ ಜಿಲ್ಲೆಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ.

emedialine

Recent Posts

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

2 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

2 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

2 hours ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

2 hours ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

3 hours ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಚುನಾವಣೆ 25ರಂದು

ಕಲಬುರಗಿ: ಆ. 25 ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ 27 ಸ್ಥಾನಗಳಿಗೆ (…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420