ಕಲಬುರಗಿ: ಅತ್ಯಾಚಾರ ಪ್ರಕರಣಗಳು ಶಿಕ್ಷಿತ ಸಮಾಜ ತಲೆ ತಗ್ಗಿಸುವ ಪ್ರಕರಣಗಳಾಗಿವೆ. ಇದನ್ನು ತಡೆಗಟ್ಟುವ ನೆಟ್ಟಿನಲ್ಲಿ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ಬಗ್ಗೆ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು
ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪೊಲೀಸ್ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಂಬಂಧಿತ ಇಲಾಖೆಯ ಎಲ್ಲಾ ಅಧಿಕಾರಿಗಳು ಮಕ್ಕಳಿಗೆ ಈ ನಿಟ್ಟಿನಲ್ಲಿ ಅರಿವು ಮೂಡಿಸುವಲ್ಲಿ ಹೆಚ್ಚು ಪಾತ್ರ ವಹಿಸಿ ಎಂದರು.
ವಿಶೇಷವಾಗಿ ಶಾಲಾ, ಕಾಲೇಜುಣ ವಸತಿ ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಸ್ಥಳ, ಒಂಟಿಯಾಗಿದ್ದ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕುರಿತು ಹಾಗೂ ಅತ್ಮರಕ್ಷಣೆ ಕಲೆ ಬಗ್ಗೆ ತರಬೇತಿ ನಿಡುವ ಅವಶ್ಯಕತೆ ಇದೆ ಎಂದು ಡಿ.ಸಿ. ಪ್ರತಿಪಾದಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಂಗಳಾ ಪಾಟೀಲ ಅವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಸ್ವಯಂ ಸುರಕ್ಷತೆ ಮತ್ತು ಕರಾಟೆ ತರಬೇತಿ ನೀಡಲು ಈಗಾಗಲೆ 300 ಜನ ಟ್ರೇನರ್ ಗಳನ್ನು ಆಯ್ಕೆ ಮಾಡಿಕೊಂಡಿದ್ದು, ಅವರಿಗೆ ಮುಂದಿನ ವಾರ ತರಬೇತಿ ನೀಡಲಾಗುತ್ತದೆ. ತದನಂತರ ತರಬೇತುದಾರರ ಮುಖೇನ 34 ದಿನದಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ಸಹಾಯದಿಂದಿಗೆ ಎಲ್ಲಾ ಶಾಲಾ-ಕಾಲೇಜು ಹಾಗೂ ವಸತಿ ನಿಲಯದಲ್ಲಿನ ಮಕ್ಕಳಿಗೆ ತರಬೇತಿ ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ದೇವಿದಾಸ್, ಹೆಚ್ಚುವರಿ ಎಸ್.ಪಿ.ಶ್ರೀನಿಧಿ, ಎ.ಸಿ.ಪಿ. ದೀಪನ್ ಎಂ.ಎನ್., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಡಿ.ಡಿ.ಪಿ.ಐ ಸಕ್ರೆಪ್ಪಗೌಡ ಬಿರಾದಾರ, ಡಿ.ಎಚ್.ಓ ಡಾ.ರಾಜಶೇಖರ ಮಾಲಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿ.ಡಿ.ಪಿ.ಓ ಗಳು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…