ಬಿಸಿ ಬಿಸಿ ಸುದ್ದಿ

ಮಹಿಳೆಯರಿಗೆ ಕೆ.ವಿ.ಕೆ. ಕಲಬುರಗಿಯಲ್ಲಿ ಸಿರಿಧಾನ್ಯ ಆಧಾರಿತ ಖಾದ್ಯಗಳ ಸ್ಪರ್ಧೆ

ಕಲಬುರಗಿ: ಮಹಿಳೆಯರಿಗೆ ಕೆ.ವಿ.ಕೆ. ಕಲಬುರಗಿಯಲ್ಲಿ ಭಾರತಿಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ, ಹೈದ್ರಾಬಾದ ಅವರೊಂದಿಗೆ ಜಂಟಿಯಾಗಿ ಕೃಷಿ ವಿಜ್ಞಾನ ಕೇಂದ್ರ ಕಲಬುರಗಿಯಲ್ಲಿ ಆಗಸ್ಟ್ 19 ರಂದು ಮಹಿಳೆಯರಿಗಾಗಿ ಸಿರಿಧಾನ್ಯ ಆಧಾರಿತ ಖಾದ್ಯಗಳ ಸ್ಪರ್ಧೆಯನ್ನು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.

ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳಲ್ಲಿ ಸಿರಿಧಾನ್ಯಗಳ ಪೌಷ್ಟಿಕಾಂಶ ಮತ್ತು ಆರೋಗ್ಯ ಪ್ರಯೋಜನಗಳು ಮತ್ತು ಕೃಷಿಗೆ ಅವುಗಳ ಸೂಕ್ತತೆಯ ಬಗ್ಗೆ ಜಾಗೃತಿ ಮೂಡಿಸಲು ಈ ವರ್ಷವು ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಆಚರಿಸಲಾಗುತ್ತಿದ್ದು ಭಾರತ ದೇಶ ಇದರ ಅಥಿತೇಯ ವಹಿಸಿದ್ದು ಹೆಮ್ಮಯ ವಿಷಯವಾಗಿದೆ.

ಸಿರಿಧಾನ್ಯಗಳ ಸುಸ್ಥಿರ ಉತ್ಪಾದನೆಯನ್ನು ಉತ್ತೇಜಿಸುವ ಹಾಗು ಉತ್ಪಾದಕರು ಮತ್ತು ಗ್ರಾಹಕರಿಗೆ ಹೊಸ ಸಮರ್ಥನೀಯ ಮಾರುಕಟ್ಟೆ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಪೂರಕವಾಗಿ ಸಿರಿಧಾನ್ಯ ಬೆಳೆಗಳ ಬೀಜ ವಿತರಣೆ ಪ್ರಾತ್ಯಕ್ಷಿಕೆ ಮತ್ತು ತರಬೇತಿ ಹೀಗೆ ಹಲವು ಚಟುವಟಿಕೆಗಳನ್ನು ಕೃಷಿ ವಿಜ್ಞಾನ ಕೇಂದ್ರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರ ಮುಂದುವರೆದ ಭಾಗವಾಗಿ ಭಾಗವಹಿಸಲಿಚ್ಛಿಸುವ ಮಹಿಳೆಯರು ಸಿರಿಧಾನ್ಯ ಆಧಾರಿತ, ಮೌಲ್ಯವರ್ಧಿತ ಬಿಸ್ಕೆಟ್, ಸಿಹಿ ಅಥವಾ ಖಾರಾ ತಿಂಡಿ-ತಿನಿಸಿನೊಂದಿಗೆ, ಅದನ್ನು ತಯಾರಿಸುವ ವಿವರವಾದ ವಿಧಾನದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ತಿಂಡಿ-ತಿನಿಸುಗಳ ಪೌಷ್ಠಿಕತೆ, ರುಚಿ ಹಾಗೂ ಮಂಡಿಸುವಿಕೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುವುದು.

ಸ್ಪರ್ಧೆಗೆ ನೊಂದಾಯಿಸಲಿಚ್ಛಿಸುವವರು ಮೊಬೈಲ್ ಸಂಖ್ಯೆ: 9480696315, 7892219462, ಗೆ ಸಂಪರ್ಕಿಸಿ ಆಗಸ್ಟ್ 18 ರೊಳಗಾಗಿ ಹೆಸರುಗಳನ್ನು ನೊಂದಾಯಿಸಬಹುದು. ಮೊದಲು ನೊಂದಾಯಿಸಿದ 25 ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ. ಸ್ಪರ್ಧೆಯಲ್ಲಿ ಭಾಗವಹಿಸಿದ ವ್ಯಕ್ತಿ ಅಥವಾ ಸಂಘದ ಮುಖ್ಯಸ್ಥರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಗುವುದು. ಆಯ್ಕೆಗೊಂಡ ಉತ್ತಮ ಖಾದ್ಯ ಉತ್ಪನಗಳ ವಾಣಿಜ್ಯಿಕರಣ ಮತ್ತು ಮಾರಾಟ ಮಾಡಲು ಸಲಹೆಗಳನ್ನು ಕೃಷಿ ವಿಜ್ಞಾನ ಕೇಂದ್ರ ಸಹಕರಿಸುವುದು.

ಸ್ಪರ್ಧೆಗೆ ತಗಲುವ ಎಲ್ಲ ಖರ್ಚು ವೆಚ್ಚವನ್ನು ಸ್ಪರ್ಧಾಳುಗಳಿಗೆ ಭರಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

48 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

56 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago