ಕಲಬುರಗಿ: ನಗರದ ಹೊರ ವಲಯದ ಬೀದರ್ರಸ್ತೆಯಲ್ಲಿ ಬರುವತಾವರಗೇರಾಕ್ರಾಸ್ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಏಷಿಯನ್ ಫನ್ವಲ್ರ್ಡಉದ್ಘಾಟನಾ ಸಮಾರಂಭ ಆ. 15ರಂದು ಸಂಜೆ 7 ಗಂಟೆಗೆಜರುಗಲಿದೆ ಎಂದು ಫನ್ ವ್ಯವಸ್ಥಾಪಕ ನಿರ್ದೇಶಕ ಮೊಹ್ಮದ್ ರಫಿಕುದ್ದೀನ್ ತಿಳಿಸಿದರು.
ಹಜರತ್ ಖ್ವಾಜಾ ಬಂದಾ ನವಾಜ್ ದರ್ಗಾದ ಡಾ.ಮೊಹ್ಮದ್ ಗೇಸುದರಾಜ್ ಖುಸ್ರೋ ಹುಸೇನಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಲಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಈಶ್ವರ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಡಾ.ಅಜಯಸಿಂಗ್, ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಡಾ.ಅವಿನಾಶ ಜಾಧವ, ಶಶೀಲ್ ಜಿ. ನಮೋಶಿ, ಬಿ.ಜಿ. ಪಾಟೀಲ, ಚಂದ್ರಕಾಂತ ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಸುನಿಲ ವಲ್ಯಾಪುರೆ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ, ಮೇಯರ್ ವಿಶಾಲ ದರ್ಗಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.
ಆರು ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಈ ಫನ್ವಲ್ರ್ಡನಲ್ಲಿ 50 ಬಗೆಯ ರೈಡರ್ಗಳಿದ್ದು, ಶುದ್ಧ, ಸಸ್ಯಹಾರ ಹಾಗೂ ಮಾಂಸಹಾರದ ಫುಡ್ ಕೋರ್ಟ್ಗಳಿವೆ. ಮಕ್ಕಳಿಗಾಗಿ ವಿವಿಧ ಬಗೆಯ ಆಟಿಕೆ, ತಿಂಡಿ, ತಿನಿಸು ಇಲ್ಲಿದೊರೆಯಲಿದ್ದು, ಉಚಿತ ಪ್ರವೇಶವಿರುತ್ತದೆ. ರೈಡ್ ಮಾಡಿದಾಗ ಮಾತ್ರ ಹಣ ಪಾವತಿಸಬೇಕಾಗುತ್ತದೆ ಎಂದರು.
ಆರಿಫ್ ಅಲಿ ಮಣಿಯಾರ್, ಫರ್ಜ್ರಫಿ, ಡಾ. ಸಲ್ಮಾನ್ ಪಟೇಲ್, ಆಬಿದ್ ಅಲಿ ಮಣಿಯಾರ್ಇತರರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…