ಕಲಬುರಗಿ: ಬಿಜೆಪಿ ಅವಧಿಯಲ್ಲಿ ಕೆಕೆಆರ್ಡಿಬಿಯನ್ನು ದುರ್ಬಲಗೊಳಿಸಲಾಗುತ್ತು. ಮಂಡಳಿಗೆ ಶೇ 96 ರಷ್ಟು ಅನುದಾನವನ್ನು ಬಳಸಿಕೊಂಡು ಅಭಿವೃದ್ದಿ ಮಾಡುವ ಅವಕಾಶವಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಶೇ 24 ಕ್ಕೆ ಇಳಿಸಲಾಗಿತ್ತು. ಇದರ ವಿರುದ್ದ ನಾವು ಧ್ವನಿ ಎತ್ತಿದ್ದೆವು ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದರು.
ಕೆಕೆಆರ್ ಡಿಬಿ ಕಚೇರಿಯಲ್ಲಿ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಕೆಕೆಆರ್ ಡಿಬಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ನಡೆದ ಪತ್ರಿಕಾಗೋಷ್ಠಿ ಅವರೊಂದಿಗೆ ಸಚಿವರು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡುತ್ತಿದ್ದರು.
ಕೆಕೆಆರ್ಡಿಬಿಗೆ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎನ್ನುವ ಮಾತನ್ನು ನಾನೂ ಹೇಳಿದ್ದೆ. ಆದರೆ ಸಿಎಂ ಅವರ ವಿವೇಚನಾ ಅಧಿಕಾರ ಬಳಸಿ ಅವರನ್ನು ( ಅಜಯ್ ಸಿಂಗ್ ) ನೇಮಿಸುವ ಸಂದರ್ಭ ಬಂದಾಗ ನಾವೆಲ್ಲ ಶಾಸಕರು ಅವರಿಗೆ ಬೆಂಬಲ ಸೂಚಿಸಿದೆವು. ಕೆಕೆಆರ್ಡ್ಬಿಯನ್ನು ಮತ್ತೆ ಸುಭದ್ರ ಸ್ಥಿತಿಗೆ ತರುವ ಉದ್ದೇಶವಿದೆ. ” ಕೆಕೆಆರ್ ಡಿಬಿಗೆ ನಿಗದಿಪಡಿಸಿದ ಅನುದಾನವನ್ನು ಬಳಸಿಕೊಂಡು ಈ ಭಾಗದ ಅಭಿವೃದ್ದಿಗೆ ಅಜಯ್ ಸಿಂಗ್ ಅವರ ನೇತೃತ್ವದಲ್ಲಿ ನಾವೆಲ್ಲರೂ ಸಹಕಾರ ನೀಡಲಿದ್ದೇವೆ ” ಎಂದು ಸಚಿವರು ಹೇಳಿದರು.
ಅಜಯ್ ಸಿಂಗ್ ಅವರು ಒಂದು ಯೋಜನೆ ಹಾಕಿಕೊಂಡಿದ್ದು ಕಕ ಭಾಗದ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆ. ಅವರಿಗೆ ನಮ್ಮ ಬೆಂಬಲವಿದೆ ಎಂದು ಸಚಿವರು ಹೇಳಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…