ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ತಹಸೀಲ್ದಾರ್ ವಿಜಯಕುಮಾರ ಮನವಿ

0
6

ಸುರಪುರ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಆ13ರ ಬೆಳಿಗ್ಗೆ 8 ಗಂಟೆಯಿಂದ ಆ15ರ(ಬುಧುವಾರ) ಸಂಜೆ 6ಗಂಟೆವರೆಗೆ ತಾಲೂಕಿನ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ತಹಶೀಲ್ದಾರ ಕೆ.ವಿಜಯಕುಮಾರ ಮನವಿ ಮಾಡಿದ್ದಾರೆ.

ತಹಶೀಲ್ ಕಾರ್ಯಾಲಯದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಹರ್ ಘರ್ ತಿರಂಗಾ ಸ್ವಾತಂತ್ರ್ಯ ದಿನಾಚರಣೆಯ ಒಂದು ಭಾಗವಾಗಿದ್ದು ದೇಶದ ನಾಗರಿಕರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರಧ್ವಜ ಹಾರಿಸಲು ಜನರನ್ನು ಪ್ರೋತ್ರಾಹಿಸುತ್ತದೆ ಹಾಗೂ ದೇಶದ ಜನರನ್ನು ಒಗ್ಗೂಡಿಸುವುದು ಇದರಿಂದ ಜನರಲ್ಲಿ ದೇಶಭಕ್ತಿಯ ಭಾವನೆ ಮೂಡುತ್ತದೆ ಎಂದು ತಿಳಿಸಿದ ಅವರು ನಗರಸಭೆ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರು 25ರೂ ಪಾವತಿಸುವ ಮೂಲಕ ರಾಷ್ಟ್ರಧ್ವಜವನ್ನು ಪಡೆಯಬಹುದಾಗಿದೆ ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಸಭೆಯಲ್ಲಿ ತಾ.ಪಂ ಇಓ ಬಸವರಾಜ ಸಜ್ಜನ್ ಸೇರಿದಂತೆ ಸಮಾಜ ಕಲ್ಯಾಣ, ಸಿಡಿಪಿಓ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಹಣಮಂತರಾಯ ಮಕಾಶಿ ಸಾರ್ವಜನಿಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here