ಬಿಸಿ ಬಿಸಿ ಸುದ್ದಿ

ಮಾಧ್ಯಮಗಳು ಜನತೆಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳಲು ಶಾಸಕ ಬಿ.ಆರ್. ಪಾಟೀಲ ಸಲಹೆ

ಆಳಂದ: ಪ್ರಜಾಪ್ರಭುತ್ವದ ಕಾವಲುನಾಯಿಯಾಗಿರುವ ಮಾಧ್ಯಮ ಇಂದು ತನ್ನ ಜವಾಬ್ದಾರಿಯನ್ನು ಮರೆತಿರುವಂತೆ ಕಾಣುತ್ತಿದ್ದರೂ ಮುದ್ರಣ ಮಾಧ್ಯಮ ತನ್ನ ವಾಸ್ತವಿಕತೆ ಹಾಗೂ ವಿಶ್ವಾಹಾರ್ಹತೆಯಿಂದಾಗಿ ಇಂದಿಗೂ ತನ್ನ ಇರುವಿಕೆಯನ್ನು ಸಾಬೀತುಪಡಿಸುತ್ತಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಹೇಳಿದರು.

ಪಟ್ಟಣದ ಎ.ವ್ಹಿ. ಪಾಟೀಲ್ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲ್ಲೂಕು ಘಟಕ ಏರ್ಪಡಿಸಿದ್ದ ಓದುಗರ ಮತ್ತು ಪತ್ರಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಸುದ್ದಿಗಳು ಗುಣಮಟ್ಟದಿಂದ ಕೂಡಿರುತ್ತಿದ್ದವು ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ವಿಶ್ವಾಸಾರ್ಹತೆಯ ಕೊರತೆ ಎದುದ್ದು ಕಾಣುತ್ತಿದೆ. ವಿದ್ಯಾರ್ಥಿಗಳು ಪತ್ರಿಕೆ ಓದುವುದು ರೂಢಿ ಮಾಡಿಕೊಳ್ಳಬೇಕು. ಅದರಲ್ಲೂ ಸಂಪಾದಕೀಯ ಪುಟ ಹಾಗೂ ಅಂಕಣ ಬರಹಗಳನ್ನು ಓದುವ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ ಮಾತನಾಡಿ, ಜನರೇ ಜರ್ನಲಿಸ್ಟ್‍ಗಳಾಗಿರುವ ಈ ತಾಂತ್ರಿಕ ಯುಗದಲ್ಲಿ ಮಾಧ್ಯಮದವರು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಕಾಪಾಡಿಕೊಂಡು ಬರಬೇಕು ಎಂದು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅಧ್ಯಕ್ಷತೆ ವಹಿಸಿದ್ದರು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಎಚ್. ಹೊಸಮನಿ ಮಾತನಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ತಾಪಂ ಇಒ ಮಾನಪ್ಪ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆಯ ಮೋನಮ್ಮ ಸುತಾರ, ಸಂಘದ ತಾಲ್ಲೂಕು ಅಧ್ಯಕ್ಷ ತಯಬಲಿ ಜರದಿ ಇದ್ದರು. ರಾಜಕುಮಾರ ಹಿರೇಮಠ ನಿರೂಪಿಸಿದರು. ಪ್ರಭಾಕರ ಸಲಗರೆ ಸ್ವಾಗತ ಕೋರಿದರು. ಶಿವಲಿಂಗ ತೇಲ್ಕರ್ ವಂದಿಸಿದರು.

ಒಂದು ಪತ್ರಿಕೆ ಸರಿ ಸುಮಾರು 32 ರಿಂದ 38 ರೂ. ವರೆಗೆ ಖರ್ಚು ಆಗುತ್ತದೆ. ಮಾರುಕಟ್ಟೆಯಲ್ಲಿ ಮಾರುವುದು 5 ರಿಂದ 7 ರೂ.ಗೆ ಮಾತ್ರ. ಈ ರೀತಿಯ ವ್ಯತ್ಯಾಸ ಇರುವುದರಿಂದ ಪತ್ರಿಕೆಗಳು ಜಾಹೀರಾತುಗಳ ಮೇಲೆ ಅವಲಂಬಿತವಾಗಿರುತ್ತವೆ. ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಪತ್ರಕರ್ತರ ಭವನಕ್ಕೆ ಶಾಸಕರು ಹೆಚ್ಚು ಕಾಳಜಿ ವಹಿಸಿ ಭವನ ನಿರ್ಮಾಣ ಮಾಡಿಕೊಡಬೇಕು. – ಬಾಬುರಾವ ಯಡ್ರಾಮಿ, ಜಿಲ್ಲಾಧ್ಯಕ್ಷ, ಕ.ಕಾ.ನಿ.ಪ, ಕಲಬುರಗಿ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago