ಜ್ಞಾನದಲ್ಲಿನ ಹೂಡಿಕೆಯು ಉತ್ತಮ ಬಡ್ಡಿಯನ್ನು ಪಾವತಿಸುತ್ತದೆ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ದೇಶಪಾಂಡೆ ಕೌಶಲ್ಯ – ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಅವಕಾಶಗಳು, ಹುಬ್ಬಳ್ಳಿ ಜೊತೆ ಒಡಂಬಡಿಕೆ ಮಾಡಿಕೊಂಡು ಮಹಾವಿದ್ಯಾಲಯದ ಬಿ.ಎ, ಬಿ.ಎಸ್ಸಿ ಮತ್ತು ಬಿ.ಕಾಮ್ ವಿದ್ಯಾರ್ಥಿನಿಯರಿಗೋಸ್ಕರ ಒಂದು ದಿನದ “ಜ್ಞಾನದಲ್ಲಿನ ಹೂಡಿಕೆಯು ಉತ್ತಮ ಬಡ್ಡಿಯನ್ನು ಪಾವತಿಸುತ್ತದೆ ” ಎಂಬ ಶಿರ್ಷಿಕೆಯ ಕಾರ್ಯಗಾರವನ್ನು ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ದೇಶಪಾಂಡೆ ಸ್ಕಿಲ್ಲಿಂಗ್ ಕಲಬುರಗಿ ವಿಭಾಗದ ಮುಖ್ಯಸ್ಥರಾದ ಶ್ರಿ. ರಾಮಕುಮಾರ ಅವರು ದೇಶಪಾಂಡೆ ಸ್ಕಿಲ್ಲಿಂಗ್ ದೇಶಪಾಂಡೆ ಫೌಂಡೇಶನ್‍ನಿಂದ ಪ್ರಾರಂಭವಾದ ಪ್ರವರ್ತಕ ವಸತಿ ಕೌಶಲ್ಯ ಅಭಿವೃದ್ಧಿ ಸಂಸ್ಥೆ 2010ರಲ್ಲಿ ಪ್ರಾರಂಭಗೊಂಡು ಇದು ಯುವಕ-ಯುವತಿಯರಿಗೆ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಕಲಿಸುತ್ತದೆ ಮಾತ್ರವಲ್ಲದೆ ಅವರನ್ನು ಜೀವನಕ್ಕಾಗಿ ಕಲಿಯುವವರನ್ನಾಗಿ ಮಾಡುತ್ತದೆ ಎಂದು ಕಾರ್ಯಗಾರದಲ್ಲಿ ಭಾಗಿಯಾದವರನ್ನು ಉದ್ದೇಶಿಸಿ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ಮಾತನಾಡುತ್ತಾ ದೇಶಪಾಂಡೆ ಸ್ಕಿಲ್ಲಿಂಗ್ ಭಾರತದ ಪ್ರಮುಖ ಕೌಶಲ್ಯ ಅಭಿವೃದ್ಧಿ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಇಂದು ಮಹಾವಿದ್ಯಾಲಯವು ಈ ಸಂಸ್ಥೆಯೊಂದಿಗೆ ಒಡಬಂಡಿಕೆ ಮಾಡಿಕೊಂಡು ಇದರ ಸಹಯೋಗದೊಂದಿಗೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೋಸ್ಕರ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿನಿಯರು ಶಿಸ್ತು, ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಸಂಪನ್ಮೂಲ ಮತ್ತು ಮುಖ್ಯವಾಗಿ ಸಮಸ್ಯೆ-ಪರಿಹರಿಸುವ ಮನಸ್ಥಿತಿಯಂತಹ ಅನುಕರಣೀಯ ವ್ಯಕ್ತಿತ್ವದ ಲಕ್ಷಣಗಳನ್ನು ಬೆಳೆಸಿಕೊಂಡು, ಮುಂಬರುವ ದಿನಗಳಲ್ಲಿ ಲಾಭದಾಯಕ ಉದ್ಯೋಗವನ್ನು ಪಡೆಯಲು ದೇಶಪಾಂಡೆ ಸ್ಕಿಲ್ಲಿಂಗ್‍ನ ತರಬೇತಿಯು ಅನುವು ಮಾಡಿಕೊಡುವುದು ಎಂದು ವಿದ್ಯಾರ್ಥಿನಿಯರಿಗೆ ತಿಳಿಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತ್ರರ ಸಿಬ್ಬಂಧಿ ವರ್ಗದವರು, ದೇಶಪಾಂಡೆ ಸ್ಕಿಲ್ಲಿಂಗ್‍ನ ಹುಬ್ಬಳ್ಳಿಯ ಆಯ್ಕೆ ಮತ್ತು ದೃಷ್ಠಿಕೋನ ವ್ಯವಸ್ಥಾಪಕರಾದ ರಾಧಾ ಪಿ, ದೇಶಪಾಂಡೆ ಸ್ಕಿಲ್ಲಿಂಗ್‍ನ ಜಿಲ್ಲೆಯ ಸಂಯೋಜಕರಾದ ಶಿವರಾಜ ಗುತ್ತೆದಾರ, ಜಿಲ್ಲೆಯ ಕಾರ್ಯನಿರ್ವಾಹಕರಾದ ತೇಜಶ್ವಿನಿ ಕನಸಗೇರಿ, ಬೀದರ ಜಿಲ್ಲೆಯ ಸಂಯೋಜಕರಾದ ಅಜೀತ ಕುಲಕರ್ಣಿ, ಯಾದಗಿರಿ ಜಲ್ಲೆಯ ಸಂಯೋಜಕರಾದ ರೇಖಾ ಎಚ್ ಉಪಸ್ಥಿತರಿದ್ದರು ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420