ಆಧುನಿಕ ಯುಗದಲ್ಲಿ ಪ್ರವಚನ ಪುರಾಣಗಳು ಜೀವನಕ್ಕೆ ಹೊಸ ಚೈತನ್ಯ: ಡಾ. ಭೀಮಾಶಂಕರ ಬಿಲಗುಂದಿ

ಕಲಬುರಗಿ: ಪ್ರವಚನಗಳು, ಪುರಾಣಗಳು ಧರ್ಮ, ಸಂಸ್ಕøತಿಯನ್ನು ಸಾರಿ ಹೇಳುತ್ತವೆ. ಅಧ್ಯಾತ್ಮಿಕ ಪ್ರವಚನಗಳನ್ನು ಕೇಳುವುದರಿಂದ ಬದುಕಿಗೆ ದಾರಿ ಕೊಂಡುಕೊಳ್ಳಲು ಸಾಧ್ಯ ಎಂದು ಎಚ್ಕೆಇ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಹೇಳಿದರು.

ಜಯನಗರ ಶಿವಮಂದಿರದಲ್ಲಿ ಶ್ರಾವಣ ಮಾಸದ ನಿಮಿತ್ತ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಒಂದು ತಿಂಗಳ ಕಾಲ ಶಿವ ಧರ್ಮ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶರಣರು,ಸಂತರು ನಡೆಸಿದ ಸರಳ ಜೀವನ ಇಂದಿನ ಜನಾಂಗಕ್ಕೆ ಮಾದರಿಯಾಗಬೇಕು.ಮಹಾತ್ಮರು ಪರೋಪಕಾರಿಯಾಗಿ ಬದುಕಿದರು.ಕಾಯಕದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆ ಮೆರೆದವರು.ಜಾತಿ, ಧರ್ಮ,ಭೇದ ಭಾವ ಅನ್ನದೆ ಮಾನವ ಕುಲದ ಉದ್ಧಾರಕ್ಕಾಗಿ, ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನರು.ಅಂಥವರ ಪ್ರವಚನ, ಪುರಾಣಗಳು ಕೇಳುವ ಮೂಲಕ ಬದುಕಿಗೆ ಹೊಸ ಚೈತನ್ಯ ತಂದುಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿ ಶಿವ ಧರ್ಮ ಎಲ್ಲರಲ್ಲೂ ಸಮಾನತೆ ಕಾಣುವ, ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡುತ್ತದೆ.ಸಕಲ ಜೀವರಾಶಿಯ ಲೇಸನ್ನೇ ಬಯಸಿ ಬಸವಣ್ಣನವರ ವಚನಗಳ ಮೂಲಕ ದಾರಿ ತೋರುವ ಬೇಳಕಾಗಿದೆ.ಬಸವ ತತ್ವ ಕೇವಲ ಹೇಳುವುದಕ್ಕಲ್ಲ ಆಚರಣೆಯಾಗಿಸಿಕೊಳ್ಳಬೇಕು.ಶರಣರು,ಸಂತರು ಎಲ್ಲರೂ ಶಿವನ ಪರಿಪಾಲಕರಾಗಿದ್ದಾರೆ.

ಶಿವನಿಗೆ ನಿಷ್ಠೆಯಿಂದ ಪಠಿಸಿದರೆ ಮನಸ್ಸಿನಲ್ಲಿದ್ದದ್ದು ಸಿದ್ಧಿಯಾಗುವುದು.ಅನುಮಾನವೇ ಬೇಡ.ಶಿವನು ಜಗದೋಡೆಯನು ಎಲ್ಲರನ್ನು ಕಾಯುತ್ತಾನೆ ಎಂದ ಅವರು 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪದಲ್ಲಿ ಸ್ತ್ರೀ, ಪುರುಷರನ್ನು ಸಾಮಾನ್ಯವಾಗಿ ಕುರಿಸುತ್ತಿದ್ದರು.ಅಂಥದೇ ಇಂದು ಶಿವಮಂದಿರದಲ್ಲಿ ನೋಡಲು ಸಿಗುತ್ತಿದೆ.ಯಾವುದೇ ಭೇದ ಭಾವವಿಲ್ಲದೆ ಸಮಾನವಾಗಿ ಕುಳಿತ್ತಿದ್ದಾರೆ ಎಂದು ಗುಣಗಾನ ಮಾಡಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಾಹಿತಿ ಡಾ ಚಿ.ಸಿ.ನಿಂಗಣ್ಣ ಮಾತನಾಡಿ ಜನರು ಪುರಾಣ, ಪ್ರವಚನಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಸಿಗುತ್ತದೆ.ಅಷ್ಟೇ ಅಲ್ಲದೆ ಮಹಾತ್ಮರ ಜೀವನ ಚರಿತ್ರೆ ಕೇಳುವುದರಿಂದ ಜೀವನ ಪಾವನವಾಗುತ್ತದೆ ಎಂದು ಹೇಳಿದರು

ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು ಧಾರ್ಮಿಕ ಕಾರ್ಯಕ್ರಮಗಳು ಮಾಡುವುದರ ಜೊತೆಗೆ ಆಧ್ಯಾತ್ಮಿಕ ಪ್ರವಚನಗಳು ಜನರ ಮನಮುಟ್ಟುವಂತೆ ಮಾಡುವುದು ಟ್ರಸ್ಟ್ ಉದ್ದೇಶವಾಗಿದೆ ಎಂದು ತಿಳಿಸಿದರು.

ಯುವ ಮುಖಂಡ ಮನೀಷ್ ಜಾಜು, ಟ್ರಸ್ಟ್ ಉಪಾಧ್ಯಕ್ಷ ವಿರೇಶ ದಂಡೋತಿ ವೇದಿಕೆಯಲ್ಲಿದ್ದರು.ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಸ್ವಾಗತಿಸಿದರು.ಜಿ.ಜಿ.ವಣಿಕ್ಯಾಳ ನಿರೂಪಿಸಿದರು.ಟ್ರಸ್ಟ ಕಾರ್ಯದರ್ಶಿ ಶಿವಪುತ್ರಪ್ಪ ಮರಡಿ, ಸಂಘಟನಾ ಕಾರ್ಯದರ್ಶಿ ಬಂಡಪ್ಪ ಕೇಸೂರ, ಸಹ ಕಾರ್ಯದರ್ಶಿ ಸಿದ್ಧಲಿಂಗ ಗುಬ್ಬಿ, ಕೋಶಾಧ್ಯಕ್ಷ ಬಸವರಾಜ ಮಾಗಿ, ಸದಸ್ಯರಾದ ಮಲ್ಲಿಕಾರ್ಜುನ ಕಲ್ಲಾ,ಬಸವರಾಜ ಅನ್ವರಕರ,ಎಂ.ಡಿ.ಮಠಪತಿ, ಭೀಮಾಶಂಕರ ಶೆಟ್ಟಿ, ನಾಗರಾಜ ಖೂಬಾ,ಟಿ.ಸಿ.ಚವ್ಹಾಣ,ಎಸ್.ಡಿ.ಸೇಡಂಕರ, ಮನೋಹರ ಬಡಶೇಷಿ, ವೀರಪ್ಪ ಹುಡುಗಿ, ಈರಯ್ಯ ಮಾಡಬಾಳಮಠ.ಮಲ್ಲಯ್ಯ ಸ್ವಾಮಿ ಬೀದಿಮನಿ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ವಾಲಿ, ಅನಿತಾ ನವಣಿ, ಸುಷ್ಮಾ ಮಾಗಿ, ಸುರೇಖಾ ಬಾಲಕೊಂದೆ, ವಿಜಯಾ ದಂಡೋತಿ, ನಿಲೋಚನಾ ಬಿಡಪ್ಪ, ಅಂಬಕ್ಕಾ ಪಾಟೀಲ್, ಗೀತಾ ಲಿಂಗರಾಜ, ಅನುರಾಧ ಕುಮಾರಸ್ವಾಮಿ ಸೇರಿದಂತೆ ಮಹಿಳೆಯರು, ಹಿರಿಯರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420