ಕಲಬುರಗಿ: ಮಹಾನಗರ ಪಾಲಿಕೆಯಿಂದ ನಗರದ ಸಾರ್ವಜನಿಕ ಉದ್ಯಾನದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ದೇಶಕ್ಕಾಗಿ ತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸುವ ನನ್ನ ಮಣ್ಣು ನನ್ನ ದೇಶ ಅಭಿಯಾನದಡಿ ಶಿಲಾಫಲಕ ಅನಾವರಣ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಪಾಲಿಕೆ ಮಹಾಪೌರ ವಿಶಾಲ್ ದರ್ಗಿ ಅವರು ಉದ್ಘಾಟಿಸಿದರು.
ಉಪ ಮಹಾಪೌರ ಶಿವಾನಂದ ಪಿಸ್ತಿ, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ಅವರು ಸೇರಿದಂತೆ ಹಲವರಿದ್ದರು.