ಬಿಸಿ ಬಿಸಿ ಸುದ್ದಿ

ಜಾನಪದ ಸಾಹಿತ್ಯದಲ್ಲಿ ಜೀವನಮೌಲ್ಯವಿದೆ: ವಲ್ಲೆಪ್ಪನವರ್

ರಂಗಂಪೇಟೆ: ಜಾನಪದ ಸಾಹಿತ್ಯ, ಸಂಗೀತ ಸಂಸ್ಕೃತಿಯಲ್ಲಿ ಜೀವನ ಮೌಲ್ಯಗಳು ಅಡಕವಾಗಿವೆ ಎಂದು ಪ್ರಸಿದ್ದ ಜಾನಪದ ಗಾಯಕ ಹುಬ್ಬಳ್ಳಿಯ ಇಮಾಮಸಾಬ ವಲ್ಲೆಪ್ಪನವರು ಹೆಳಿದರು.

ಸಮಿಪದ ರಂಗಂಪೇಟೆಯ ಖಾದಿಕೇಂದ್ರದ ಆವರಣದಲ್ಲಿ ಜಾನಪದ ಕಲಾಲೋಕ ರಂಗಂಪೇಟ ಸಂಸ್ಥೆಯ ವತಿಯಿಂದ ವಿಶ್ವ ಜಾನಪದ ದಿನಾಚಾರಣೆಯ ಅಂಗವಾಗಿ ಆಯೋಜಿಸಿದ್ದ ಜಾನಪದ ಸಾಹಿತ್ಯದ ಕುರಿತು ಉಪನ್ಯಾಸ ಹಾಗೂ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜನಪದ ಎಂಬುವುದು ಮಾನವಿಯ ಸಂಬಂಧದ ಮೂಲ ಸರಪಳಿ, ನಮ್ಮ ಮೂಲ ಬದುಕಿನ ಪ್ರತಿ ಹಂತದಲ್ಲು ಜಾನಪದ ಬಂದು ಹೊಗುತ್ತದೆ, ಇಂದಿನ ಬದಲಾದ ಸನ್ನಿವೇಶದಲ್ಲಿ ಜಾನಪದ ಸಂಸ್ಕೃತಿ ಆಧುನಿಕರಣದ ಹೊಡೆತಕ್ಕೆ ಮರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಜಾನಪದ ಎಂಬುವುದು ಒಂದು ಸಂಸ್ಕೃತಿ ಅದು ನಮ್ಮ ನೈತಿಕತೆ, ವೈಚಾರಿಕೆ, ಪಾರದರ್ಶಕತೆ, ಪ್ರತಿನಿಧಿಸುತ್ತದೆ ಜಾನಪದಕ್ಕೆ ಹಿರಿದಾದ ಶಕ್ತಿ ಇದೆ, ಇದು ಮಾತೃ ಹೃದಯದ ಭಾಷೆ ಇದಕ್ಕೆ ತನ್ನದೆ ಆದ ಸಂಸ್ಕೃತಿ, ಸಂಸ್ಕಾರ ಹಿನ್ನೆಲೆ ಒಳಗೊಂಡಿಗೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಜಾನಪದ ಕಲಾಲೋಕ ಸಂಸ್ಥೆಯ ಅಧ್ಯಕ್ಷ ಶಿವಶರಣಪ್ಪ ಹೆಡಿಗಿನಾಳ ವಹಿಸಿದರು, ಜಾನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಕುರಿತು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಉಪನ್ಯಾಸ ನೀಡಿದರು, ಪ್ರಮುಖರಾದ ಕರ್ನಾಟಕ ನವನಿರ್ಮಾಣ ವೇದಿಕೆಯ ಅಧ್ಯಕ್ಷ ಶಿವರಾಜ ಕಲಿಕೇರಿ, ಕಾರ್ಯದರ್ಶಿ ವಾಸುದೇವ ಬೈರಿಮಡ್ಡಿ, ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ ಸೇರಿದಂತೆ ಇತರರು ಇದ್ದರು. ಮಹೇಶ ಬಿಶೆಟ್ಟಿ ನಿರುಪಿಸಿದರು, ಮೌನೇಶ ಐನಾಪುರ ಸ್ವಾಗತಿಸಿದರು, ಬಸವರಾಜ ಚನ್ನಪಟ್ನ ವಂದಿಸಿದರು. ಇದೇ ಸಂದರ್ಭದಲ್ಲಿ ನಡೆದ ಇಮಾಮಸಾಬ ವಲ್ಲೆಪ್ಪನವರ ತಂಡದ ಜಾನಪದ ಕಾರ್ಯಕ್ರಮ ಗಮನ ಸೇಳೆಯಿತು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

50 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago