ಸುರಪುರ:ನಗರದ ವಿವಿಧ ಕಡೆಗಳಲ್ಲಿ ಸತೀಶ ಜಾರಕಿಹೊಳಿ ಅಭಿಮಾನಿಗಳ ಬಳಗ ಹಾಗೂ ರವಿ ಪಾಟೀಲ್ ಪೌಂಡೇಶನ್ ವತಿಯಿಂದ ನಗರದಲ್ಲಿ ವೈಚಾರಿಕ ಬಸವ ಪಂಚಮಿ ಕಾರ್ಯಕ್ರಮ ನಡೆಸಲಾಯಿತು.
ಬಳಗದ ಮುಖಂಡರಾದ ರಾಮು ನಾಯಕ ಅರಳಹಳ್ಳಿ ಕಾರ್ಯಕ್ರಮದ ಕುರಿತು ಮಾತನಾಡಿ,ಸಚಿವರಾದ ಸತೀಶ ಜಾರಕಿಹೊಳಿಯವರು ಜನರಲ್ಲಿನ ಮೌಢ್ಯತೆಯನ್ನು ದೂರಮಾಡಲು ಸದಾಕಾಲ ಕಾರ್ಯನಿರ್ವಹಿಸುತ್ತಾರೆ,ಅವರನ್ನು ಸ್ಪೂರ್ಥಿಯಾಗಿಟ್ಟುಕೊಂಡಿರುವ ಸುರಪುರ ತಾಲೂಕಿನ ಸತೀಶ ಜಾರಕಿಹೊಳಿ ಅಭಿಮಾನಿ ಬಳಗ ಮತ್ತು ಸಮಾಜ ಸೇವಕ ರವಿ ಪಾಟೀಲ್ ರಾಯಚೂರ ಪೌಂಡೇಶನ್ ವತಿಯಿಂದ ಇಂದು ನಗರದ ತಾಲುಕು ಆಸ್ಪತ್ರೆಯಲ್ಲಿನ ರೋಗಿಗಳಿಗೆ ಮತ್ತು ಮಕ್ಕಳಿಗೆ ಹಾಲು ವಿತರಣೆ ಮಾಡುವ ಮೂಲಕ ಅವರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ವಿತರಣೆ ಮಾಡಲಾಗಿದೆ.ಅಲ್ಲದೆ ನಗರದಲ್ಲಿನ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳೊಂದಿಗೆ ಹಾಲು ವಿತರಣೆ ಮಾಡಿ ವೈಚಾರಿಕತೆಯ ಬಸವ ಪಂಚಮಿ ಆಚರಿಸಲಾಗುತ್ತಿದೆ.ಯಾಕೆಂದರೆ ಬಸವಣ್ಣನವರು ಕಲ್ಲ ನಾಗರ ಕಂಡರೆ ಹಾಲು ಎರೆಯುವರು,ದಿಟದ ನಾಗರ ಕಂಡರೆ ಕೊಲ್ಲು ಎಂಬುವರಯ್ಯ ಎಂದು ಮೌಢ್ಯತೆಯನ್ನು ಎತ್ತಿ ತೋರಿಸಿದ್ದಾರೆ.
ಬಸವಣ್ಣನವರ ಈ ವಚನವೇ ನಮಗೆ ಸ್ಪೂರ್ಥಿಯಾಗಬೇಕು,ಕಲ್ಲು ನಾಗರದ ಮೇಲೆ ಹಾಲು ಸುರಿದು ಹಾಳು ಮಾಡುವ ಬದಲು ಅದೇ ಹಾಲನ್ನು ಮಕ್ಕಳಿಗೆ ಕುಡಿಸಿದಲ್ಲಿ ಅವರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಸಾಧ್ಯವಿದೆ,ಎಲ್ಲರು ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕು ಎಂದು ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡಲಾಯಿತು.ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಪಾಟೀಲ್,ನ್ಯಾಯವಾದಿ ಯಲ್ಲಪ್ಪ ಹುಲಿಕಲ್ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮುಖಂಡರಾದ ಮಾನು ನಾಯಕ ಕಲಬುರ್ಗಿ,ಶ್ರೀಕಾಂತ ನಾಯಕ,ಪ್ರಶಾಂತ ದೊಡ್ಮನಿ,ಅಮೋಘ ಪಂಚಾಂಗಮಠ,ಸುಪ್ರೀತ್ ಭಂಡಾರೆ ಇತರರು ಭಾಗವಹಿಸಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…