ಶಹಾಬಾದ : ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ಎಂದು ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಗುರು ಸುಧೀರ ಕುಲಕರ್ಣಿ ಹೇಳಿದರು.
ಅವರು ರವಿವಾರ ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಆಯೋಜಿಸಲಾದ ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ದೇವರಾಜ ಅರಸರು ಕೃಷಿಕ ಕುಟುಂಬದಿಂದ ಬಂದು ಸಾಹಿತ್ಯ, ಶೈಕ್ಷಣಿಕ ಕ್ಷೇತ್ರಗಳ ಬಗ್ಗೆ ಅರಿತುಕೊಂಡು ರಾಜಕೀಯ ಮಟ್ಟದಲ್ಲೂ ಉನ್ನತ ಮಟ್ಟಕ್ಕೆ ಏರಿದರು. ಉಳುವನ ಸಂಕಷ್ಟವನ್ನು ಪರಿಹರಿಸಲು ಎಷ್ಟೇ ವಿರೋಧಗಳ ನಡುವೆಯೂ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ ಉಳುವನೇ ಭೂಮಿಯ ಒಡೆಯ ಆಗುವಂತಹ ಭೂ ಸುಧಾರಣೆ ಕಾನೂನನ್ನು ಜಾರಿಗೆ ತಂದು ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಅರಸರೇ ಕಾರಣಿಭೂತರು ಎಂದರು.
ಎಸ್.ಜಿ.ವರ್ಮಾ ಪ್ರೌಢಶಾಲೆಯ ಮುಖ್ಯಗುರು ಮಲ್ಲಿನಾಥ ಪಾಟೀಲ ಮಾತನಾಡಿ,ಅರಸು ಅವರು ಜೀತದಾಳು ಹಾಗೂ ಮಲಹೊರುವ ಪದ್ಧತಿಯನ್ನು ನಿμÉೀಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದವರು. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬಂತೆ ಎಲ್ಲಾ ಬಡವರಿಗೂ ವಸತಿ ಸೌಲಭ್ಯ, ಶಿಕ್ಷಣದಲ್ಲಿ ಸಮಾನತೆ ಕಲ್ಪಿಸುವ ಮೂಲಕ ಸಮಾಜಮುಖಿಯಾಗಿ ಶ್ರಮಿಸಿದವರು ಎಂದು ತಿಳಿಸಿದರು.ಜನಪ್ರಿಯ ಯೋಜನೆಗಳನ್ನು ಜನಪರ ಯೋಜನೆಗಳನ್ನಾಗಿ ಅನುμÁ್ಠನಗೊಳಿಸುವಂತೆ ಮಾಡಿದ ಕೀರ್ತಿ ಅರಸು ಅವರದ್ದು, ಸಾಮಾಜಿಕ ಸಂಬಂಧವನ್ನು ಬೆಳೆಸುವುದರಲ್ಲಿ ದಿಮಂತ ನಾಯಕರಾಗಿದ್ದವರು. ಇವರ ಮಾನವೀಯ ಗುಣ, ಪರಿವರ್ತನೆಯ ಪ್ರಜ್ಞೆ, ಕಾರ್ಯವೈಖರಿಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ತಿಳಿಸಿದರು.
ಮುಖ್ಯಗುರುಮಾತೆ ಅನಿತಾ ಶರ್ಮಾ ಮಾತನಾಡಿ, ಡಿ.ದೇವರಾಜ ಅರಸು ಅವರು ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಅವರ ಗೇಣಿ ಶಾಸನ, ಹಾವನೂರು ಆಯೋಗದಂತಹ ನಿರ್ಧಾರಗಳನ್ನು ತೆಗೆದುಕೊಂಡು ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದವರು ಅರಸು ಅವರು ತಮ್ಮ ನಿರ್ಧಾರದ ದೂರದೃಷ್ಠಿಯಿಂದ ಮುಂದಿನ ಪೀಳಿಗೆಯ ಬದುಕಿನ ಯೋಜನೆಗಳನ್ನು ರೂಪಿಸಿದವರು ಎಂದು ಹೇಳಿದರು.
ಶಿಕ್ಷಕರಾದ ಗೀತಾ ಸಿಪ್ಪಿ, ರಂಜಿತಾ ಹಿರೇಮಠ, ಭಾರತಿ ಚವ್ಹಾಣ, ಶ್ರೀರಾಮ ಚವ್ಹಾಣ, ಸಂಗೀತಾ, ಮಂಜುಳಾ ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…