ಶಹಾಬಾದ :ತಾಲೂಕಿನಲ್ಲಿ ಸೋಮವಾರ ನಾಗರ ಪಂಚಮಿ ನಿಮಿತ್ತ ಸಂಭ್ರಮ-ಸಡಗರದಿಂದ ನಾಗರ ಕಟ್ಟೆಗೆ ಹಾಗೂ ಹುತ್ತಿಗೆ ಮಹಿಳೆಯರು ಹಾಲೆರೆಯುವ ಮೂಲಕ ನಾಗರ ಪಂಚಮಿ ಆಚರಿಸಲಾಯಿತು.
ಬಹುತೇಕರು ಸಮೀಪದ ನಾಗರ ಕಲ್ಲಿನ ಮೂರ್ತಿಗೆÉ ವಿಶೇಷ ಪೂಜೆ ಮಾಡಿ ಹಾಲೆರೆದರೆ, ಕೆಲವರು ದೇವಸ್ಥಾನ ಆವರಣದಲ್ಲಿರುವ ಕಲ್ಲಿನ ನಾಗರ ಮೂರ್ತಿಗೆ ಹಾಲೆರೆದರು.ಕೆಲವು ಜನರು ನಾಗರ ಹುತ್ತಿಗೆ ಹಾಲೆರೆದು ಹಬ್ಬ ಆಚರಿಸಿದರು.
ಬೆಳಿಗ್ಗೆ ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಮನೆ ಮುಂದೆ ನಾಗರ ಹಾವುಗಳ ಸುಂದರವಾದ ರಂಗೋಲಿ ಹಾಕುವ ಮೂಲಕ ಮಹಿಳೆಯರು ಬೆಳಿಗ್ಗೆಯೇ ಶ್ರಾವಣಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು.
ನಾಗರ ಹುತ್ತಿಗೆ ಹೂಮಾಲೆ ಹಾಕಿ ವಿಶೇಷ ಪೂಜೆ ಸಲ್ಲಿಸಿ ಹಾಲೆರೆದರು. ಅಪ್ಪನ ಪಾಲು, ಅವ್ವನ ಪಾಲು, ಅಣ್ಣನ ಪಾಲು ಹೀಗೇ ಮನೆಯ ಎಲ್ಲರ ಪಾಲಿನ ಹಾಲನ್ನು ಹಾಕಿ ನೈವೇದ್ಯ ಸಲ್ಲಿಸಿದರು.
ಶೇಂಗಾ, ಪುಟಾಣಿ, ಕೊಬ್ಬರಿ ಉಂಡಿ ಸೇರಿದಂತೆ ಇತರ ಸಿಹಿ ಪದಾರ್ಥಗಳನ್ನು ದೇವರಿಗೆ ಅರ್ಪಿಸಿದರು. ಮನೆಗಳಲ್ಲಿ ಉರಿದ ಅರಳು, ಎಳ್ಳು, ಶೇಂಗಾ ಉಂಡೆ, ಹೆಸರುಕಾಳು ಹೀಗೆ ನಾನಾ ಬಗೆಯ ಸಿಹಿ ಹಾಗೂ ಖಾರದ ತಿನಿಸುಗಳನ್ನು ಮಾಡಿ ನಾಗಪ್ಪನಿಗೆ ಅರ್ಪಿಸಲಾಯಿತು.
ಬಳಿಕ ಕುಟುಂಬ ಬಾಂಧವರು ತಿಂಡಿಗಳನ್ನು ಪರಸ್ಪರ ಹಂಚಿಕೊಂಡರು. ಗ್ರಾಮೀಣ ಪ್ರದೇಶಗಳಲ್ಲಿ ಮರಗಳಿಗೆ ಜೋಕಾಲಿ ಕಟ್ಟಿ ಸಂಭ್ರಮಿಸುವುದು ಕಂಡುಬಂತು. ಪುರುಷರು ಮನರಂಜನೆಗಾಗಿ ನಿಂಬೆಹಣ್ಣಿನ ಆಟ, ಕಣ್ಣುಕಟ್ಟಿಕೊಂಡು ವಸ್ತುಗಳ ಹುಡುಕಾಟ ಸೇರಿ ಮೊದಲಾದ ಗ್ರಾಮೀಣ ಸೊಗಡಿನ ಆಟಗಳನ್ನು ಆಡಿ ಖುಷಿಪಟ್ಟರು.ತರೇಹವಾರಿ ಪಲ್ಯ ತಯಾರಿಸಿ ಕುಟುಂಬದವರು ಒಟ್ಟಿಗೆ ಕುಳಿತು ಭೋಜನ ಸವಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…