ಮಾದನಹಿಪ್ಪರಗಾದಲ್ಲಿ ಶ್ರೀ ಧನಲಕ್ಷ್ಮೀ ಸೌಹಾರ್ದ ಶಾಖೆ ಉದ್ಘಾಟನೆ

ಆಳಂದ: ತಾಲೂಕಿನ ಮಾದನಹಿಪ್ಪರಗಾದಲ್ಲಿ ಅ.22ರಂದು ಬೆಳಗಿನ 10:30ಕ್ಕೆ ಸರಸಂಬಾದ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ (ನಿ).ದ ಮಾದನಹಿಪ್ಪರಗಾ 5ನೇ ಶಾಖೆ ಉದ್ಘಾಟನೆ ಹಾಗೂ 21ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ ಎಂದು ಸೌಹಾರ್ದ ಸಂಘದ ಅಧ್ಯಕ್ಷ ಮಹಾಂತಪ್ಪ ಎಸ್. ಆಲೂರೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾದನಹಿಪ್ಪರಗಾ ಗ್ರಾಮದ ಶ್ರೀ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದ ಸಾನ್ನಿಧ್ಯವನ್ನು ಗ್ರಾಮದ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ನೇತೃತ್ವವನ್ನು ಗುರುಶಾಂತೇಶ್ವರ ಹಿರೇಮಠದ ಶ್ರೀ ಶಾಂತವೀರ ಶಿವಾಚಾರ್ಯರು ವಹಿಸುವರು. ಸಮಾರಂಭ ಹಾಗೂ ಶಾಖೆಯ ಉದ್ಘಾಟನೆಯನ್ನು ಕೋತಲಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಸಂರಕ್ಷಕ ಬಸವರಾಜ ಪಾಟೀಲ ಸೇಡಂ ಅವರು ನೆರವೇರಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸುಭಾಷ ಗುತ್ತೇದಾರ, ಕಲಬುರಗಿ ಕೆವೈಎಇಸಿಸಿ ಬ್ಯಾಂಕ್ ಅಧ್ಯಕ್ಷ ಸುರೇಶ ಸಜ್ಜನ್, ಬೆಂಗಳೂರಿನ ಸೌಹಾರ್ದ ನಿರ್ದೇಶಕಿ ಶೈಲಜಾ ತಪ್ಪಲಿ, ಉಪನಿಬಂಧಕಿ ಮಂಜುಳಾ, ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮುಳೆಗಾಂವ, ಕಲಬುರಗಿ ಸಿದ್ಧಿ ವಿನಾಯಕ ಸೌಹಾರ್ದ ಸಂಘದ ಅಧ್ಯಕ್ಷ ಸಂಜೀವ ಮಹಾಜನ್, ಪ್ರಾಂತೀಯ ವ್ಯವಸ್ಥಾಪಕ ಸೂರ್ಯಕಾಂತ ರ್ಯಾಕಲೆ, ಗ್ರಾಪಂ ಅಧ್ಯಕ್ಷೆ ಸುವರ್ಣ ಈ. ಮೈಂದರ್ಗಿ ಆಗಮಿಸಲಿದ್ದಾರೆ.

ಇದೇ ವೇಳೆ ದುಡಿಯುವರ ಅಭಿವೃದ್ಧಿ ಸ್ವಾವಲಂಬನೆ ಬದುಕು ಕುರಿತು ನಿವೃತ್ತ ಪ್ರಾಚಾರ್ಯ ಡಾ. ನರೇಂದ್ರ ಬಡಶೇಷಿ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಶ್ರೀಧನಲಕ್ಷ್ಮೀ ಸೌ.ಸ.ಸಂಘದ ಅಧ್ಯಕ್ಷ ಮಹಾಂತಪ್ಪ ಆಲೂರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭಕ್ಕೆ ಸಭೆಗೆ ಸರ್ವ ಸದಸ್ಯರು ಹಾಜರಾಗಬೇಕು ಎಂದು ಅವರು ಕೋರಿದ್ದಾರೆ.

ಅಲ್ಲದೆ, ಸಂಘದ ಉಪಾಧ್ಯಕ್ಷ ಸೋಲಿಂಗ ಎಸ್. ಕವಲಗಿ, ನಿರ್ದೇಶಕರಾದ ಸೂರ್ಯಕಾಂತ ಎಂ. ಪಾಟೀಲ, ಶ್ರೀಕಾಂತ ಬಿ. ದೇಶಟ್ಟಿ, ಜಗನಾಥ ದೇಶಮುಖ, ವಿಜಯನಂದ ಕೆ. ಮಾಶಾಳೆ, ಮಲ್ಲಿನಥ ಕೆ. ಗೋವಿನ, ಕುಪೇಂದ್ರ ವಿ. ಪಾಟೀಲ, ಬೆನಕಪ್ಪ ಎ. ಸೊಸಟ್ಟಿ, ವಿಠ್ಠಲ ಕೆ. ಖಾನಾಪೂರೆ, ಪ್ರಕಾಶ ಎಂ. ಕುಂಬಾರ, ಸಂಜುಬಾಯಿ ಬಿ. ಮೈಂದರ್ಗಿ, ಕವಿತಾ ಎಂ. ಹಿರೇಮಠ, ದೀಪಾ ಯೋಗಿರಾಜ ಮಾಡಿಯಾಳೆ, ವಿಜಯಲಕ್ಷ್ಮೀ ಬಿ. ಕೊರಳ್ಲಿ, ಜ್ಯೋತಿ ಡಿ. ಶಿಂಧೆ, ನಾಗೇಂದ್ರ ಬಿ. ಮುಗಳೆ, ಬಸವರಾಜ ಎಸ್. ಜಮಾದಾರ ಮತ್ತು ಮುಖ್ಯ ಕಾರ್ಯನಿರ್ವಾಹಕ ಸೋಮನಾಥ ನಿಂಬರಗಿ ಉಪಸ್ಥಿತರಿರುವರು ಎಂದು ತಿಳಿಸಿದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420