371 (ಜೆ) ಪ್ರಾದೇಶಿಕ ಕೇಂದ್ರ ಸಿಎಂ ಗಮನಕ್ಕೆ: ಕೆಕೆಆರ್‍ಡಿಬಿ ಅಧ್ಯಕ್ಷ ಅಜಯ್ ಸಿಂಗ್

ಮಂಡಳಿಯ ಕೆಲಸ ಕಾರ್ಯಗಳು ಸಮರ್ಪಕವಾಗಿ ಕಾರ್ಯಗಳು ನಡೆಯುವ ನಿಟ್ಟಿನಲ್ಲಿ ಇಂಜಿನಿಯರ್ ಗಳ ನೇಮಕಾತಿ ಅವಶ್ಯಕತೆ ಇದೆ. ಶೀಘ್ರವೇ ಸಚಿವರು ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಭೇಟಿ ಮಾಡಿ ಚರ್ಚಿಸಿ 273 ಇಂಜಿನಿಯರ್ ಗಳ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿಕೊಡಲಾಗುವುದು. ಸದ್ಯ 60 ಇಂಜಿನಿಯರ್ ಕೆಲಸ ಮಾಡುತ್ತಿದ್ದಾರೆ. -ಡಾ. ಅಜಯಸಿಂಗ್, ಕೆಕೆಆರ್ಡಿಬಿ ಅಧ್ಯಕ್ಷ

ಕಲಬುರಗಿ: ಕಲ್ಯಾಣ ಕನಾಟಕ ಭಾಗದ ಅಭ್ಯರ್ಥಿಗಳ ನೇಮಕಾತಿ ಹಾಗೂ ಮುಂಬಡ್ತಿಗೆ ಸಂಬಂಧಿಸಿದಂತೆ 371 (ಜೆ) ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಅಚಿತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಅಜಯ್ ಸಿಂಗ್ ಹೇಳಿದರು.

ಮಂಗಳವಾರ ನಿರ್ಮಾಣ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಶೀಘ್ರವೇ ಕಲ್ಯಾಣ ಕರ್ನಾಟಕ ಶಾಸಕರ ಕಾರ್ಯಗಳ ಮೌಲ್ಯಮಾಪನ ಮಾಡಲಾಗುವುದು ಎಂದು ತಿಳಿಸಿದರು.

ಪಸಕ್ತ ಆರ್ಥಿಕ ವರ್ಷದಲ್ಲಿ ಮಂಡಳಿ ಅನುದಾನ ಬಳಕೆ ಮಾಡಲು ಡಿಸೆಂಬರ್ ವರೆಗೂ ಕಾಲಾವಕಾಶವಿದೆ. ಅದರೊಳಗೆ ತಮ್ಮ ಕ್ಷೇತ್ರದಲ್ಲಿ ಕೈಗೊಳ್ಳುವ ಕಾಮಗಾರಿಗಳ ಕುರಿತು ಕ್ರಿಯಾಯೋಜನೆಯನ್ನು ಬೇಗನೆ ಶಾಸಕರು ಸಲ್ಲಿಸಿದರೆ ಅನುದಾನ ನೀಡಲು ಅನುಕೂಲವಾಗುವುದು ಎಂದರು.

ಡಿಸೆಂಬರ್ ಲೋಕಾರ್ಪಣೆ: ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಡಿಸೆಂಬರ್ ಅಂತ್ಯದ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳು ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ ಶೇಕಡ 75 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಮಂಡಳಿಯಿಂದ ಒಟ್ಟು 1045 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಅನುದಾನದ ಸಮರ್ಪಕ ಬಳಕೆ ಹಾಗೂ ತ್ವರಿತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ತಾವೆಂದು ಭೇಟಿ ನೀಡಿ ವೀಕ್ಷಣೆ ಮಾಡಿದ್ದಾಗಿ ಹೇಳಿದರು.

ಮಂಡಳಿ ಕಾರ್ಯದರ್ಶಿ ಅನಿರುದ್ಧ ಶ್ರವಣ್, ಜಯದೇವ ಆಸ್ಪತ್ರೆಯ ಬಾಬುರಾವ್ ಹುಡುಗಿಕರ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

1 hour ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

3 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

3 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420